ನವದೆಹಲಿ (ಐಎಎನ್ಎಸ್): ‘ಲೋಕಸಭೆ ಚುನಾವಣೆಯಲ್ಲಿ ಜನಪ್ರತಿನಿಧಿ ಆಯ್ಕೆ ಮಾಡುವಲ್ಲಿ ನಿರ್ಣಾಯಕ ಪಾತ್ರವಹಿಸಿದ ದೇಶದ ನಾಗರೀಕರಿಗೆ ನಾನು ಕೃತಜ್ಞನಾಗಿದ್ದೇನೆ. ಜನತೆಯ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ’ ಎಂದು 16ನೇ ಲೋಕಸಭೆಯ ಮೊದಲ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಅಧಿವೇಶನಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾಧ್ಯಮದ ಎದುರು ಮಾತನಾಡಿದ ಅವರು, ದೇಶದ ಜನತೆಯ ವಿಶ್ವಾಸ ಮತ್ತು ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ ಎಂದು ಪ್ರಜಾತಂತ್ರದ ದೇಗುಲದಲ್ಲಿ ವಾಗ್ದಾನ ಮಾಡುತ್ತೇನೆ’ ಎಂದರು.