<p><strong>ಬೆಂಗಳೂರು: </strong>‘ಆಧುನಿಕ ಬದುಕಿನ ಭರಾಟೆಯಲ್ಲಿ ಜನಪದ ಕಲೆಗಳು ನಶಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು. ಬೆಂಗಳೂರು ವಕೀಲರ ಸಾಹಿತ್ಯ ಕೂಟವು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ಜನಪದ ಸಂಸ್ಕೃತಿಯು ಮನುಷ್ಯನ ಮಾನವೀಯ ಗುಣಗಳನ್ನು ಅರಳಿಸುವ ಶಕ್ತಿ ಹೊಂದಿದೆ. ರಾಜ್ಯದಲ್ಲಿ 147 ಜನಪದ ಕಲಾಪ್ರಕಾರಗಳು ಅಸ್ತಿತ್ವದಲ್ಲಿವೆ. ಮುಂದಿನ ದಿನಗಳಲ್ಲಿ ಕಲಾಪ್ರಕಾರಗಳ ಸಂಖ್ಯೆ ಇಳಿಕೆಯಾಗಲಿದೆ’ ಎಂದರು.<br /> <br /> ನ್ಯಾಯಮೂರ್ತಿ ಹುಲವಾಡಿ ಜಿ.ರಮೇಶ್ ಮಾತನಾಡಿ, ‘ಪಾಶ್ಚಿಮಾತ್ಯ ಸಂಸ್ಕೃತಿ ಬಗ್ಗೆ ಹೆಚ್ಚು ಒಲವು ಹೊಂದಿರುವ ನಗರಗಳಲ್ಲಿ ಆಚರಣೆ ನೆಲಕಚ್ಚಿವೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ಸಿ.ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಆಧುನಿಕ ಬದುಕಿನ ಭರಾಟೆಯಲ್ಲಿ ಜನಪದ ಕಲೆಗಳು ನಶಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು. ಬೆಂಗಳೂರು ವಕೀಲರ ಸಾಹಿತ್ಯ ಕೂಟವು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ಜನಪದ ಸಂಸ್ಕೃತಿಯು ಮನುಷ್ಯನ ಮಾನವೀಯ ಗುಣಗಳನ್ನು ಅರಳಿಸುವ ಶಕ್ತಿ ಹೊಂದಿದೆ. ರಾಜ್ಯದಲ್ಲಿ 147 ಜನಪದ ಕಲಾಪ್ರಕಾರಗಳು ಅಸ್ತಿತ್ವದಲ್ಲಿವೆ. ಮುಂದಿನ ದಿನಗಳಲ್ಲಿ ಕಲಾಪ್ರಕಾರಗಳ ಸಂಖ್ಯೆ ಇಳಿಕೆಯಾಗಲಿದೆ’ ಎಂದರು.<br /> <br /> ನ್ಯಾಯಮೂರ್ತಿ ಹುಲವಾಡಿ ಜಿ.ರಮೇಶ್ ಮಾತನಾಡಿ, ‘ಪಾಶ್ಚಿಮಾತ್ಯ ಸಂಸ್ಕೃತಿ ಬಗ್ಗೆ ಹೆಚ್ಚು ಒಲವು ಹೊಂದಿರುವ ನಗರಗಳಲ್ಲಿ ಆಚರಣೆ ನೆಲಕಚ್ಚಿವೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ಸಿ.ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>