ಅಲ್ಲದೇ, ‘ಯಾರು ದೇಶದ ಗೌರವ, ಏಕತೆ ಹಾಗೂ ಸಾರ್ವಭೌಮತ್ವಕ್ಕೆ ಹಾನಿ ಮಾಡುವರೋ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ನಮಗೆ ನಮ್ಮ ಸೇನೆ, ಅರೆಸೇನಾ ಪಡೆಗಳು ಹಾಗೂ ಸಶಸ್ತ್ರ ಬಲಗಳ ಮೇಲೆ ನಂಬಿಕೆಯಿದೆ. ಅವರ ಸಮಗ್ರತೆ ಹಾಗೂ ದೇಶದ ಬಗೆಗಿನ ಪ್ರೀತಿಯ ಬಗ್ಗೆ ಸಂದೇಹ ಸಲ್ಲದು’ ಎಂದು ಅವರು ನುಡಿದಿದ್ದಾರೆ.
ಇದೇ ವೇಳೆ, ಭಾರತ ನಿರಂತರವಾಗಿ ನೆರೆಯ ರಾಷ್ಟ್ರಗಳೊಂದಿಗೆ ಸ್ನೇಹ ಬಯಸುತ್ತಲೇ ಬಂದಿದೆ. ಆದರೆ ಪಾಕಿಸ್ತಾನ ಮಾತ್ರ ಯಾವಾಗಲೂ ಮೋಸ ಮಾಡುತ್ತಿದೆ ಎಂದು ಜರಿದರು.