<p><strong>ಉಜಿರೆ (ದಕ್ಷಿಣ ಕನ್ನಡ ಜಿಲ್ಲೆ): </strong>ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಆಯೋಗದಡಿಯಲ್ಲಿ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಯೋಗ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರದ ಆಯುಷ್ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ವೈ. ನಾಯ್ಕ್ ಭಾನುವಾರ ಇಲ್ಲಿ ಹೇಳಿದರು.<br /> <br /> ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ತರಬೇತಿ ಕೇಂದ್ರದ ಒಂದನೇ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಎರಡನೇ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.<br /> <br /> ನಾಗಮಂಗಲದ ಯೋಗ ತರಬೇತಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ 50 ಎಕರೆ ಜಾಗ ನೀಡಿದೆ. ಮುಂದಿನ 5 ವರ್ಷದೊಳಗೆ ದೇಶದಲ್ಲಿ ಇದೇ ರೀತಿ ಆರು ಯೋಗ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.<br /> <br /> ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಇತರ ವೈದ್ಯಕೀಯ ಪದ್ಧತಿಗಳಂತೆ ಪ್ರಕೃತಿ ಚಿಕಿತ್ಸಾ ವಿಧಾನಕ್ಕೂ ಸರ್ಕಾರ ಸಮಾನ ಮಾನ್ಯತೆ ನೀಡಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.<br /> <br /> ಸರ್ಕಾರವು ಬಜೆಟ್ನ ಶೇ 10 ಭಾಗವನ್ನು ಆಯುಷ್ ಇಲಾಖೆಗೆ ಮೀಸಲಿಡಬೇಕು. ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಆಯುಷ್ ಘಟಕ ಪ್ರಾರಂಭಿಸಬೇಕು. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಪ್ರತ್ಯೇಕ ಅಧ್ಯಯನ ಮಂಡಳಿ ರಚಿಸಬೇಕು. ಬೆಂಗಳೂರಿನಲ್ಲಿ ಸರ್ಕಾರದ ವತಿಯಿಂದ ಮಾದರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ ಜಿಲ್ಲೆ): </strong>ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಆಯೋಗದಡಿಯಲ್ಲಿ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಯೋಗ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರದ ಆಯುಷ್ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ವೈ. ನಾಯ್ಕ್ ಭಾನುವಾರ ಇಲ್ಲಿ ಹೇಳಿದರು.<br /> <br /> ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ತರಬೇತಿ ಕೇಂದ್ರದ ಒಂದನೇ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಎರಡನೇ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.<br /> <br /> ನಾಗಮಂಗಲದ ಯೋಗ ತರಬೇತಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ 50 ಎಕರೆ ಜಾಗ ನೀಡಿದೆ. ಮುಂದಿನ 5 ವರ್ಷದೊಳಗೆ ದೇಶದಲ್ಲಿ ಇದೇ ರೀತಿ ಆರು ಯೋಗ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.<br /> <br /> ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಇತರ ವೈದ್ಯಕೀಯ ಪದ್ಧತಿಗಳಂತೆ ಪ್ರಕೃತಿ ಚಿಕಿತ್ಸಾ ವಿಧಾನಕ್ಕೂ ಸರ್ಕಾರ ಸಮಾನ ಮಾನ್ಯತೆ ನೀಡಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.<br /> <br /> ಸರ್ಕಾರವು ಬಜೆಟ್ನ ಶೇ 10 ಭಾಗವನ್ನು ಆಯುಷ್ ಇಲಾಖೆಗೆ ಮೀಸಲಿಡಬೇಕು. ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಆಯುಷ್ ಘಟಕ ಪ್ರಾರಂಭಿಸಬೇಕು. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಪ್ರತ್ಯೇಕ ಅಧ್ಯಯನ ಮಂಡಳಿ ರಚಿಸಬೇಕು. ಬೆಂಗಳೂರಿನಲ್ಲಿ ಸರ್ಕಾರದ ವತಿಯಿಂದ ಮಾದರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>