ನವದೆಹಲಿ: ಮುಂಡೆ ಅವರು ಬುಧವಾರ (ಜೂನ್ 4) ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಬೇಕಿತ್ತು. ಮಹಾರಾಷ್ಟ್ರದಲ್ಲಿನ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಕಾರಣ ಬುಧವಾರ ತಡವಾಗಿ ಪ್ರಮಾಣವಚನ ಸ್ವೀಕರಿಸಲು ಅವರು ಅನುಮತಿಯನ್ನೂ ಪಡೆದಿದ್ದರು. ಆದರೆ, ವಿಧಿಯ ಎಣಿಕೆಯೇ ಬೇರೆ ಇತ್ತು.
‘ಅವರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ವಾಪಸು ಬರುವುದು ತಡವಾಗುವ ಕಾರಣ ಬುಧವಾರ ವಿಳಂಬವಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ತಿಳಿಸಿ, ನನ್ನ ಅನುಮತಿ ಪಡೆದುಕೊಂಡಿದ್ದರು. ಆದರೆ, ಈಗ ಅವರೇ ಇಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ದುಃಖಿತರಾದರು.