ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕುಗಳಲ್ಲಿ ಅಕ್ರಮವಾಗಿ ಹಣ ಇಟ್ಟಿರುವವರ ಹೆಸರುಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳ-ವಾರ ಲೇವಡಿ ಮಾಡಿದ್ದಾರೆ.
‘ಕಪ್ಪು ಹಣ ಇರಿಸಿರುವವರ ಹೆಸರುಗಳನ್ನು ಶೀಘ್ರವೇ ಬಹಿರಂಗಪಡಿಸಲಾಗುತ್ತದೆ. ಇದರಿಂದ ಖಂಡಿತವಾಗಿಯೂ ಬಿಜೆಪಿಗೆ ಮುಜುಗರ ಆಗುವು-ದಿಲ್ಲ. ಈ ಹೆಸರುಗಳನ್ನು ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.
‘ವಿದೇಶಿ ಬ್ಯಾಂಕುಗಳಲ್ಲಿ ಅಕ್ರಮವಾಗಿ ಹಣ ಇಟ್ಟಿರುವವರ ಹೆಸರನ್ನು ಬಿಜೆಪಿ ಬಹಿರಂಗಪಡಿ-ಸುವುದಿಲ್ಲ ಎಂದು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಕಾನೂನು ವಿಧಿಗಳನ್ನು ಅನುಸರಿ-ಸಿದ ನಂತರ ನಾವು ಹೆಸರುಗಳನ್ನು ಬಹಿರಂಗಪಡಿಸುತ್ತೇವೆ’ ಎಂದು ಜೇಟ್ಲಿ ತಿಳಿಸಿದ್ದಾರೆ.