ತುಮಕೂರು: ಸಮಾಜದಲ್ಲಿ ಶಾಂತಿ ಕದಡುವ ಗೂಂಡಾ ಪ್ರವೃತ್ತಿ, ಚಾಕು–ಚೂರಿ ಸಂಸ್ಕೃತಿ ಬೆಂಗಳೂರಿನಲ್ಲಿ ವಿಪರೀತವಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ನಗರ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಸಮುದಾಯ ಭವನದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘ ಮಂಗಳವಾರ ಆಯೋಜಿಸಿದ್ದ ನಿವೃತ್ತರ ರಾಜ್ಯಮಟ್ಟದ ಸಮಾವೇಶ ಮಾತನಾಡಿದರು.
‘ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕದಡುವ ಶಕ್ತಿಗಳು ಹೆಚ್ಚಿವೆ. ಜಾತಿ,ಧರ್ಮ ಹಾಗೂ ಭಾಷೆ ಹೆಸರಲ್ಲಿ ಶಾಂತಿಭಂಗ ತರುವ ಕೆಲಸ ನಿರಾತಂಕವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಹೇಳಿದರು.