‘ಮಕ್ಕಳ ರಕ್ಷಣೆ, ಪೋಷಣೆ ಮತ್ತು ಹೊಣೆ ಸಮಾಜದ ಆದ್ಯ ಕರ್ತವ್ಯ. ಮುಗ್ಧ ಕಂದಮ್ಮಗಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದರೆ ಇದಕ್ಕೆ ಎಲ್ಲರೂ ಹೊಣೆ. ಇಂಥ ಪ್ರಕರಣಗಳ ಬಗ್ಗೆ ಸಮರ್ಪಕ ತನಿಖೆ ಆಗಬೇಕು. ದುಷ್ಕೃತ್ಯಗಳನ್ನು ಸಹಿಸಲು ಅಸಾಧ್ಯ ಎಂಬ ಸಂದೇಶವನ್ನು ಶಿಶುಕಾಮಿಗಳಿಗೆ ರವಾನಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
‘ವಿಬ್ಗಯೊರ್ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪೊಲೀಸರ ಗೊಂದಲಮಯ ಹೇಳಿಕೆಗಳು ವ್ಯವಸ್ಥೆ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.