ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳೆ ರಕ್ಷಣೆ ಸಮಾಜದ ಎಲ್ಲರ ಹೊಣೆ’

Last Updated 25 ಜುಲೈ 2014, 8:53 IST
ಅಕ್ಷರ ಗಾತ್ರ

ಚಿಟಗುಪ್ಪ: ಮಹಿಳೆಯರ ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರಜ್ಞಾವಂತ ಸಮಾಜದ ಎಲ್ಲ ಜನರ ಮೇಲಿದೆ  ಎಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಎ.ಬಿ.ಸಜ್ಜನ್‌ ಹೇಳಿದರು.

ಗುರುವಾರ ಹುಮನಾಬಾದ್ ತಾಲ್ಲೂಕಿನ ಮಂಗಲಗಿ ಗ್ರಾಮದಲ್ಲಿ ಲತಾ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಮಹಿಳಾ ಜಾಗೃತಿ ಅರಿವು ಕಾರ್ಯ­ಕ್ರಮದಲ್ಲಿ ಮಾತನಾಡಿ, ಆದರ್ಶ ಸಮಾಜ ನಿರ್ಮಾಣ ಮಾಡಲು ಮಹಿಳೆ ಪಾತ್ರ ಅಗತ್ಯವಾಗಿದೆ. ಎಲ್ಲರೂ ಮಹಿಳೆ­ಯರನ್ನು ಗೌರವ ಭಾವನೆಯಿಂದ ಕಾಣಬೇಕು ಎಂದು ಹೇಳಿದರು.

ಹುಮನಾಬಾದ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿಯರಾದ ಮಲ್ಲಮ್ಮ, ಹೊನ್ನಮ್ಮ ಮಾತನಾಡಿದರು. ಲತಾ ಸಂಸ್ಥೆ ಸಂಚಾಲಕಿ ಸುಮತಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಮನಸ್ವಿನಿ ಯೋಜನೆ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಸಾವಿತ್ರಾ ಶೀಲವಂತ ಸ್ವಾಗತಿಸಿದರು. ಮಮಿತಾ ನಿರೂಪಿಸಿದರು. ಜ್ಯೋತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT