<p><strong>ಮಾಗಡಿ</strong>: ಮಾವು ಬೆಳೆಗಾರರು ಹಣ್ಣಗಳನ್ನು ಮಾಗಿಸಲು ರಾಸಾಯನಿಕಗಳನ್ನು ಬಳಸಬಾರದು. ನೈಸರ್ಗಿಕವಾಗಿಯೇ ಹಣ್ಣುಗಳು ಮಾಗಬೇಕು. ಇದು ಆರೋಗ್ಯಕ್ಕೂ ಒಳ್ಳೆಯದು ಎಂದು ಜಿ.ಕೆ.ವಿ.ಕೆ. ಬೆಂಗಳೂರಿನ ಕೃಷಿ ಮಾರುಕಟ್ಟೆ ವಿಭಾಗದ ಪ್ರಾಧ್ಯಾಕ ಹಾಗೂ ಮುಖ್ಯಸ್ಥ ಡಾ. ಜಯರಾಮ್ ಸಲಹೆ ನೀಡಿದರು.<br /> <br /> ತಾಲ್ಲೂಕಿನ ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ‘ಮಾವಿನಲ್ಲಿ ಕೊಯ್ಲು ಪೂರ್ವ ಮತ್ತು ಕೊಯ್ಲೋತ್ತರ ನಿರ್ವಹಣೆ’ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ನೇರ ಮಾರುಕಟ್ಟೆಯನ್ನು ಕಲ್ಪಿಸುವ ಮೂಲಕ ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸಿ ನಾಲ್ಕು ಪಟ್ಟು ಅಧಿಕ ಲಾಭವನ್ನು ಪಡೆಯಬಹುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕೃಷಿ ಮಾರುಕಟ್ಟೆ ವಿಭಾಗದಿಂದ ರೈತರಿಗೆ ನೇರ ಮಾರುಕಟ್ಟೆಯ ಬಗ್ಗೆ ಸಹಕಾರ ನೀಡಲಾಗುವುದು ಎಂದು ಭಾಗವಹಿಸಿದ ರೈತರಿಗೆ ತಿಳಿಸಿದರು.<br /> <br /> ಕೃಷಿ ಅನುಸಂದಾನ ಪರಿಷತ್ತಿನ ವಲಯ ನಿರ್ದೇಶನಾಲಯ ಪ್ರಧಾನ ವಿಜ್ಞಾನಿ ಡಾ.ಸಿ.ವಿ.ಸಾಯಿರಾಂ, ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕ ಡಾ. ಕೆ. ಎಚ್. ನಾಗರಾಜ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಲಲಿತಾ, ಡಾ. ಮುರಳಿಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಮಾವು ಬೆಳೆಗಾರರು ಹಣ್ಣಗಳನ್ನು ಮಾಗಿಸಲು ರಾಸಾಯನಿಕಗಳನ್ನು ಬಳಸಬಾರದು. ನೈಸರ್ಗಿಕವಾಗಿಯೇ ಹಣ್ಣುಗಳು ಮಾಗಬೇಕು. ಇದು ಆರೋಗ್ಯಕ್ಕೂ ಒಳ್ಳೆಯದು ಎಂದು ಜಿ.ಕೆ.ವಿ.ಕೆ. ಬೆಂಗಳೂರಿನ ಕೃಷಿ ಮಾರುಕಟ್ಟೆ ವಿಭಾಗದ ಪ್ರಾಧ್ಯಾಕ ಹಾಗೂ ಮುಖ್ಯಸ್ಥ ಡಾ. ಜಯರಾಮ್ ಸಲಹೆ ನೀಡಿದರು.<br /> <br /> ತಾಲ್ಲೂಕಿನ ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ‘ಮಾವಿನಲ್ಲಿ ಕೊಯ್ಲು ಪೂರ್ವ ಮತ್ತು ಕೊಯ್ಲೋತ್ತರ ನಿರ್ವಹಣೆ’ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ನೇರ ಮಾರುಕಟ್ಟೆಯನ್ನು ಕಲ್ಪಿಸುವ ಮೂಲಕ ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸಿ ನಾಲ್ಕು ಪಟ್ಟು ಅಧಿಕ ಲಾಭವನ್ನು ಪಡೆಯಬಹುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕೃಷಿ ಮಾರುಕಟ್ಟೆ ವಿಭಾಗದಿಂದ ರೈತರಿಗೆ ನೇರ ಮಾರುಕಟ್ಟೆಯ ಬಗ್ಗೆ ಸಹಕಾರ ನೀಡಲಾಗುವುದು ಎಂದು ಭಾಗವಹಿಸಿದ ರೈತರಿಗೆ ತಿಳಿಸಿದರು.<br /> <br /> ಕೃಷಿ ಅನುಸಂದಾನ ಪರಿಷತ್ತಿನ ವಲಯ ನಿರ್ದೇಶನಾಲಯ ಪ್ರಧಾನ ವಿಜ್ಞಾನಿ ಡಾ.ಸಿ.ವಿ.ಸಾಯಿರಾಂ, ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕ ಡಾ. ಕೆ. ಎಚ್. ನಾಗರಾಜ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಲಲಿತಾ, ಡಾ. ಮುರಳಿಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>