ಫಿರೋಜಾಬಾದ್ (ಉ. ಪ್ರ.): ಚುನಾವಣೆ ಸಂದರ್ಭದಲ್ಲಿ ಮುಸ್ಲಿಮರ ಓಲೈಕೆಗೆ ಮುಂದಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ತಾವು ಅಧಿಕಾರಕ್ಕೆ ಬಂದಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಮುಸ್ಲಿಮರಿಗೆ ಮೀಸಲಾತಿ ದೊರಕಿಸಿಕೊಡಲು ಯತ್ನಿಸುವುದಾಗಿ ಹೇಳಿದ್ದಾರೆ. ಮೋದಿ ಅಧಿಕಾರಕ್ಕೆ ಬರದಂತೆ ತಡೆಯುವ ಶಕ್ತಿ ಸಮಾಜವಾದಿ ಪಕ್ಷಕ್ಕೆ ಮಾತ್ರ ಇದೆ ಎಂದು ಹೇಳಿದ್ದಾರೆ.
ಮುಸ್ಲಿಮರು ಈ ದೇಶ ಕಟ್ಟಿದ್ದಾರೆ ಹಾಗೂ ಅವರ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.