ಇಂದು ನಡೆದ ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು ಕಳಂಕಿತ ಸಚಿವರು ರಾಜಿನಾಮೆ ನೀಡುವವರೆಗೂ ಸದನದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಸದನದಲ್ಲಿ ಬಿಜೆಪಿ ಹಗರಣಗಳ ಬಗ್ಗೆ ಕಾಂಗ್ರೆಸ್ ಧ್ವನಿ ಎತ್ತಲಿದೆ ಇದಕ್ಕೆ ಸಂಬಂಧಿಸಿದಂತೆ ಬಲವಾದ ಸಾಕ್ಷಿಗಳು ನಮ್ಮ ಬಳಿ ಇವೆ ಎಂದು ಅವರು ತಿಳಿಸಿದರು.
ಕಳಂಕಿತ ಸಚಿವರ ವಿರುದ್ಧ ಕ್ರಮ ಕೈಗೊಂಡು ಪ್ರಧಾನಮಂತ್ರಿಗಳು ರೇಡಿಯೊದಲ್ಲಿ ನೈತಿಕ ಪಾಠ ಮಾಡಲಿ ಎಂದು ಮೋದಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.