ವಿಧಾನಸಭೆಯಲ್ಲಿ ಸೋಮವಾರ ಕೆ.ಆರ್.ರಮೇಶ್ಕುಮಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು ಬೃಹತ್ ಮತ್ತು ಮಧ್ಯಮ ನೀರಾವರಿ ಯೋಜನಾ ಕಾಮಗಾರಿಗಳಿಗೆ 2011–12ರಲ್ಲಿ ₨6789.95 ಕೋಟಿ, 2012–13ರಲ್ಲಿ ₨7044.28 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮೀಸಲಾಗಿಟ್ಟ ಪ್ರಮಾಣಕ್ಕೆ ಅನುಗುಣವಾಗಿ ನೀರಿನ ಹಂಚಿಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.