ಬೆಂಗಳೂರು: ‘ಪಟ್ಟಭದ್ರರು ಸಿದ್ದರಾಮಯ್ಯ ಅವರ ಸರ್ಕಾರವನ್ನು ಪದಚ್ಯುತಗೊಳಿಸಲು ಪಿತೂರಿ ನಡೆಸಿದ್ದು, ಅದಕ್ಕೆ ಅವಕಾಶ ನೀಡಬಾರದು’ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಂಗಳವಾರ ಆಗ್ರಹಪಡಿಸಿದರು.
‘ಜನಸಂಖ್ಯೆ ಆಧಾರದ ಮೇಲೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸುತ್ತಿದ್ದ ನಾಯಕ ಮಹಾಸಭಾದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು.
ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ಸಚಿವರಿಂದ ಸಿಕ್ಕ ನಂತರ ಮಹಾಸಭಾದ ಮುಖಂಡರು ಧರಣಿ ಕೈಬಿಟ್ಟರು. ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಸಂಡೂರು ಶಾಸಕ ಇ.ತುಕಾರಂ ಈ ಸಂದರ್ಭದಲ್ಲಿ ಹಾಜರಿದ್ದರು.