ಸವದತ್ತಿ (ಬೆಳಗಾವಿ ಜಿಲ್ಲೆ): ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಇದೇ 20ರಂದು ರಾಜ್ಯ ಮಟ್ಟದ ಶಿಕ್ಷಕರ ಶೈಕ್ಷಣಿಕ ಸಮಾವೇಶ ಮತ್ತು ವಾರ್ಷಿಕ ಸಾಮಾನ್ಯ ಸಭೆ ಜರುಗಲಿದೆ.
ಇಲ್ಲಿನ ಮಾಮನಿ ಕಲ್ಯಾಣ ಮಂಟಪ ದಲ್ಲಿ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀಕಲ್ಮಠದ ಶಿವಲಿಂಗ ಸ್ವಾಮೀಜಿ ವಹಿಸಲಿದ್ದು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಎಂ.ಕೆ. ಶ್ರೀಧರ್ ಅಧ್ಯಕ್ಷತೆ ವಹಿಸುವರು.
ಶಾಸಕ ಆನಂದ ಮಾಮನಿ ಸಮಾವೇಶ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕೌಜಲಗಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.