ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವೂ ಆಗಿರುವ ಡಿಸೆಂಬರ್ 25ರಂದು ‘ಉತ್ತಮ ಆಡಳಿತ’ದ ಕುರಿತು ವಿಚಾರಗೋಷ್ಠಿ ಮತ್ತು ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಸಂಸದರಿಗೆ ಸೂಚನೆ ನೀಡಿದ್ದಾರೆ.
ಅಂದು ಆರೋಗ್ಯ ತಪಾಸಣೆ, ರಕ್ತದಾನ ಮತ್ತು ನೇತ್ರ ತಪಾಸಣಾ ಶಿಬಿರ ಮತ್ತು ಆಸ್ಪತ್ರೆಯಲ್ಲಿರುವ ರೋಗಿ-ಗಳಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ಸಮಾಜ ಸೇವೆ ಮಾಡಬೇಕು ಎಂದು ಮೋದಿಯವರು ಸಂಸದರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ನ ಗ್ರಂಥಾಲಯದಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.