ನವದೆಹಲಿ (ಪಿಟಿಐ): ಮಹಿಳಾ ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜಪಾಲ್ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಜೂನ್ 27ರಂದು ವಿಚಾರಣೆಗೆ
ಕೈಗೆತ್ತಿಕೊಳ್ಳಲಿದೆ.
ಮೊದಲು ಈ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ 7ಕ್ಕೆ ನಿಗದಿಪಡಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸಬೇಕು ಎಂದು ತೇಜಪಾಲ್ ಪರ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ನ್ಯಾಯಾಲಯವನ್ನು ಕೋರಿಕೊಂಡರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೇನ್ ಹಾಗೂ ಎಸ್.ಕೆ.ಸಿಂಗ್್ ಅವರಿದ್ದ ಪೀಠವು ವಿಚಾರಣೆಯನ್ನು ಜೂನ್ 27ಕ್ಕೆ ನಿಗದಿಪಡಿಸಿತು.