ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27 ಕ್ಕೆ ರೈತರ ಸಮಾವೇಶ

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದಲ್ಲಿ ಮೇ 27 ರಂದು ರೈತರ ಸಮಾವೇಶ ನಡೆಯಲಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

‘ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶವನ್ನು ಮಹಾತ್ಮಾ ಗಾಂಧಿ ಅವರ ಮೊಮ್ಮಗಳು ತಾರಾ ಗಾಂಧಿ ಅವರು ಉದ್ಘಾಟಿಸಲಿದ್ದಾರೆ. ‘ಕಿಸಾನ್‌ ಏಕ್ತಾ’ ಸಂಘಟನೆ ಪ್ರಧಾನ ಸಂಚಾಲಕ ದೇವೇಂದ್ರ ಶರ್ಮಾ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ರೈತ ಸಾಲ ಮನ್ನಾ, ಬರಗಾಲ ತಡೆಗಟ್ಟುವ ಯೋಜನೆಗಳ ಜಾರಿ, ಕನಿಷ್ಠ ಬೆಂಬಲ ಬೆಲೆ, ಕಂದಾಯ ಮತ್ತು ವಿದ್ಯುತ್‌ ಬಿಲ್‌ ಬಾಕಿ ರದ್ದು, ಉದ್ಯೋಗ ಖಾತರಿ  ಯೋಜನೆ, ಸಮಗ್ರ ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಹಕ್ಕೊತ್ತಾಯ ಮಾಡಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT