ರಾಮೇಶ್ವರ (ತಮಿಳುನಾಡು) (ಪಿಟಿಐ): ಪ್ರತ್ಯೇಕ ಘಟನೆಗಳಲ್ಲಿ ಭಾರತದ 33 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ.
ತಮಿಳುನಾಡಿನ ಮನ್ನಾರ್ ಜಿಲ್ಲೆ ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ಕಿರುದ್ವೀಪ ಕಚ್ಚತೀವು ಸಮೀಪ ಮೀನುಗಾರಿಕೆಯಲ್ಲಿ ತೊಡಗಿದ್ದ ಈ ಮೀನುಗಾರರನ್ನು ಬಂಧಿಸಿರುವುದಾಗಿ ಪೊಲೀಸ್ ಮತ್ತು ಮೀನುಗಾರಿಕೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ದಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಭಾಗವಹಿಸಿದ ವಾರದಲ್ಲೇ ಮೀನುಗಾರರ ಬಂಧನವಾಗಿದೆ.