ಲಖನೌ (ಪಿಟಿಐ): ಲೋಕಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನಿಂದ ಕಂಗೆಟ್ಟಿರುವ ಸಮಾಜವಾದಿ ಪಕ್ಷದ (ಎಸ್ಪಿ) ಮುಖಂಡ, ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು ತಮ್ಮ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನ ಹುದ್ದೆ ಹೊಂದಿರುವ 36 ಮುಖಂಡರನ್ನು ವಜಾ ಮಾಡಿದ್ದಾರೆ.
ಸೋಲಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದ್ದರೂ, ಪದತ್ಯಾಗಕ್ಕೆ ಅಖಿಲೇಶ್ ನಿರಾಕರಿಸಿದ್ದಾರೆ. ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣ ಏನು ಎಂಬುದನ್ನು ವಿಶ್ಲೇಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಬಿಎಸ್ಪಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಯವರು ಪಕ್ಷದ ವಿಧಾನಸಭಾ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ವಿಸರ್ಜನೆ ಮಾಡಿದರು.