ನವದೆಹಲಿ (ಪಿಟಿಐ): ಎಂಟನೆಯ ತರಗತಿಯವರೆಗೆ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸಬಾರದು ಎಂಬ ನಿಯಮಾವಳಿಯನ್ನು ಪರಾಮರ್ಶೆಗೆ ಒಳಪಡಿಸುವಂತೆ ಶಿಕ್ಷಣಕ್ಕೆ ಸಂಬಂಧಿಸಿದ ಕೇಂದ್ರ ಸಲಹಾ ಸಮಿತಿ ಶಿಫಾರಸು ಮಾಡಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ಬುಧವಾರ ತಿಳಿಸಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಉಪೇಂದ್ರ ಕುಶ್ವಾಹ ಸದನಕ್ಕೆ ಈ ವಿಚಾರ ತಿಳಿಸಿದರು.