<p><strong>ಶಿವಮೊಗ್ಗ:</strong> ‘ಅಕಾಡೆಮಿಗಳ ಕಾರ್ಯಕ್ರಮಗಳು ಇಂದಿನ ಅಗತ್ಯಗಳ ಹಾಗೂ ಹೊಸ ತಲೆಮಾರಿನ ತುಡಿತಗಳಿಗೆ ಅನುಗುಣವಾಗಿ ವಿಕೇಂದ್ರೀಕರಣಗೊಳ್ಳಬೇಕು’ ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ವಿ. ನಾರಾಯಣ ಅಭಿಪ್ರಾಯಪಟ್ಟರು.<br /> <br /> ನಗರದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ<br /> ಅಕಾಡೆಮಿಯ ‘ಸುವರ್ಣ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.<br /> <br /> ಹಣಕಾಸಿನ ಹೊಣೆಗಾರಿಕೆ ಜತೆಗೆ ಸಾಮಾಜಿಕ–ಸಾಂಸ್ಕೃತಿಕ ಹೊಣೆಗಾರಿಕೆ ಕೂಡ ಅಕಾಡೆಮಿಗಳಿಗೆ ಇರಬೇಕು. ಸಮಾಜದಲ್ಲಿ ಅಕಾಡೆಮಿಗಳ ಬಗ್ಗೆ ಹಗುರ ಭಾವನೆ ಇದೆ; ‘ಬಿಳಿ ಆನೆ’, ‘ಗಂಜಿ ಕೇಂದ್ರ’ ಎಂಬ ಟೀಕಾಸ್ತ್ರಗಳ ನಡುವೆಯೂ ಅಕಾಡೆಮಿಗಳು ಸಾಂಸ್ಕೃತಿಕ ಹೊಣೆಗಾರಿಕೆ ನಿರ್ವಹಿಸುವುದರ ಕುರಿತು ಸುದೀರ್ಘ ಚರ್ಚೆಗಳಾಗಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಸಾಹಿತ್ಯ ಅಕಾಡೆಮಿ ಗೌರವ ಸ್ವೀಕರಿಸಿದ ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ ಮಾತನಾಡಿ, ಅಕಾಡೆಮಿಗಳ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು. ಸಾಂಸ್ಕೃತಿಕ ಲೋಕದ ಸಾಹಿತಿ, ಕಲಾವಿದರಿಂದ ಕೂಡಿದ ಒಂದು ಸಂಸ್ಥೆಯಾಗಿ ಅಕಾಡೆಮಿಗಳು ರೂಪುಗೊಳ್ಳಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಅಕಾಡೆಮಿಗಳ ಕಾರ್ಯಕ್ರಮಗಳು ಇಂದಿನ ಅಗತ್ಯಗಳ ಹಾಗೂ ಹೊಸ ತಲೆಮಾರಿನ ತುಡಿತಗಳಿಗೆ ಅನುಗುಣವಾಗಿ ವಿಕೇಂದ್ರೀಕರಣಗೊಳ್ಳಬೇಕು’ ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ವಿ. ನಾರಾಯಣ ಅಭಿಪ್ರಾಯಪಟ್ಟರು.<br /> <br /> ನಗರದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ<br /> ಅಕಾಡೆಮಿಯ ‘ಸುವರ್ಣ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.<br /> <br /> ಹಣಕಾಸಿನ ಹೊಣೆಗಾರಿಕೆ ಜತೆಗೆ ಸಾಮಾಜಿಕ–ಸಾಂಸ್ಕೃತಿಕ ಹೊಣೆಗಾರಿಕೆ ಕೂಡ ಅಕಾಡೆಮಿಗಳಿಗೆ ಇರಬೇಕು. ಸಮಾಜದಲ್ಲಿ ಅಕಾಡೆಮಿಗಳ ಬಗ್ಗೆ ಹಗುರ ಭಾವನೆ ಇದೆ; ‘ಬಿಳಿ ಆನೆ’, ‘ಗಂಜಿ ಕೇಂದ್ರ’ ಎಂಬ ಟೀಕಾಸ್ತ್ರಗಳ ನಡುವೆಯೂ ಅಕಾಡೆಮಿಗಳು ಸಾಂಸ್ಕೃತಿಕ ಹೊಣೆಗಾರಿಕೆ ನಿರ್ವಹಿಸುವುದರ ಕುರಿತು ಸುದೀರ್ಘ ಚರ್ಚೆಗಳಾಗಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಸಾಹಿತ್ಯ ಅಕಾಡೆಮಿ ಗೌರವ ಸ್ವೀಕರಿಸಿದ ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ ಮಾತನಾಡಿ, ಅಕಾಡೆಮಿಗಳ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು. ಸಾಂಸ್ಕೃತಿಕ ಲೋಕದ ಸಾಹಿತಿ, ಕಲಾವಿದರಿಂದ ಕೂಡಿದ ಒಂದು ಸಂಸ್ಥೆಯಾಗಿ ಅಕಾಡೆಮಿಗಳು ರೂಪುಗೊಳ್ಳಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>