ಬೋಧನಾ ಅವಧಿ 22 ಗಂಟೆಗೆ: ಇಂದಿನಿಂದ ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ವಾರದ ಬೋಧನಾ ಅವಧಿಯನ್ನು ಕಾಲೇಜು ಶಿಕ್ಷಣ ಇಲಾಖೆ 22 ಗಂಟೆಗೆ ಏರಿಸಿರುವುದನ್ನು ಖಂಡಿಸಿ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಗುರುವಾರದಿಂದ ರಾಜ್ಯದಾದ್ಯಂತ ತರಗತಿ ಬಹಿಷ್ಕರಿಸಲು ನಿರ್ಧರಿಸಿದೆ.
ಪರೀಕ್ಷಾ ಕರ್ತವ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಸೇರಿದಂತೆ ಯಾವುದೇ ಕೆಲಸವನ್ನು ಮಾಡದಿರಲು ಸಂಘವು ತೀರ್ಮಾನಿಸಿದೆ.
ಮುತ್ತಿಗೆ: ಆದೇಶ ವಾಪಸ್ಗೆ ಒತ್ತಾಯಿಸಿ ಇದೇ 18ರಂದು ಇಲಾಖೆಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಸಂಘದ ಗೌರವಾಧ್ಯಕ್ಷ ಬಿ. ರಾಜಶೇಖರ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.