<p><strong>ಬೆಂಗಳೂರು: </strong>ಕನ್ನಡ ಸಾಹಿತ್ಯ ಪರಿಷತ್ತಿನ 25ನೇ ಅಧ್ಯಕ್ಷರಾಗಿ ಮನು ಬಳಿಗಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.<br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ. ದಯಾನಂದ ಮತ್ತು ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಮನು<br /> ಬಳಿಗಾರ್ ಅವರಿಗೆ ಕನ್ನಡ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. <br /> <br /> ನಂತರ ಮಾತನಾಡಿದ ಪುಂಡಲೀಕ ಹಾಲಂಬಿ, ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಹೋರಾಟವನ್ನು ಮುಂದುವರಿಸುವಂತೆ ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.<br /> <br /> ‘ಚುನಾವಣೆ ಮುಗಿದಿದೆ. ಇನ್ನು ಎಲ್ಲರೂ ಒಂದಾಗಬೇಕು. ಸಾಹಿತ್ಯದ ಕೆಲಸವನ್ನು, ನಾಡು–ನುಡಿಯ ಹೋರಾಟವನ್ನು ಒಟ್ಟಾಗಿ ಮಾಡಬೇಕು. ಸಾಹಿತಿಗಳು ಎಲ್ಲ ವಿಚಾರಕ್ಕೂ ಸ್ಪಂದಿಸದೆ ಪರದೆ ಹಾಕಿ ಕುಳಿತುಕೊಳ್ಳುವುದು ಸರಿಯಲ್ಲ’ ಎಂದರು.<br /> <br /> ಕನ್ನಡ ಕಡ್ಡಾಯಕ್ಕೆ ಕ್ರಮ: ‘ರಾಜ್ಯದಲ್ಲಿರುವ ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷಾ ಪಠ್ಯವನ್ನು ಅಳವಡಿಸುವ ಕುರಿತು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮನು ಬಳಿಗಾರ್ ಹೇಳಿದರು.<br /> <br /> ‘ಹೊಟೇಲು, ಮಾಲ್ಗಳಲ್ಲಿ ಕನ್ನಡವನ್ನು ಬಳಸುವಂತೆ ಮನವೊಲಿಸಲಾಗುವುದು. ಖಾಸಗಿ ಕಂಪೆನಿಗಳಲ್ಲಿ ಕನ್ನಡ ಅನುಷ್ಠಾನಗೊಳಿಸಲು ಉದ್ಯಮಿಗಳಾದ ಸುಧಾ ಮೂರ್ತಿ, ಅಜೀಂ ಪ್ರೇಮ್ಜಿ ಮುಂತಾದವರನ್ನು ಬಳಸಿಕೊಳ್ಳಲಾಗುವುದು ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕನ್ನಡ ಸಾಹಿತ್ಯ ಪರಿಷತ್ತಿನ 25ನೇ ಅಧ್ಯಕ್ಷರಾಗಿ ಮನು ಬಳಿಗಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.<br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ. ದಯಾನಂದ ಮತ್ತು ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಮನು<br /> ಬಳಿಗಾರ್ ಅವರಿಗೆ ಕನ್ನಡ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. <br /> <br /> ನಂತರ ಮಾತನಾಡಿದ ಪುಂಡಲೀಕ ಹಾಲಂಬಿ, ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಹೋರಾಟವನ್ನು ಮುಂದುವರಿಸುವಂತೆ ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.<br /> <br /> ‘ಚುನಾವಣೆ ಮುಗಿದಿದೆ. ಇನ್ನು ಎಲ್ಲರೂ ಒಂದಾಗಬೇಕು. ಸಾಹಿತ್ಯದ ಕೆಲಸವನ್ನು, ನಾಡು–ನುಡಿಯ ಹೋರಾಟವನ್ನು ಒಟ್ಟಾಗಿ ಮಾಡಬೇಕು. ಸಾಹಿತಿಗಳು ಎಲ್ಲ ವಿಚಾರಕ್ಕೂ ಸ್ಪಂದಿಸದೆ ಪರದೆ ಹಾಕಿ ಕುಳಿತುಕೊಳ್ಳುವುದು ಸರಿಯಲ್ಲ’ ಎಂದರು.<br /> <br /> ಕನ್ನಡ ಕಡ್ಡಾಯಕ್ಕೆ ಕ್ರಮ: ‘ರಾಜ್ಯದಲ್ಲಿರುವ ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷಾ ಪಠ್ಯವನ್ನು ಅಳವಡಿಸುವ ಕುರಿತು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮನು ಬಳಿಗಾರ್ ಹೇಳಿದರು.<br /> <br /> ‘ಹೊಟೇಲು, ಮಾಲ್ಗಳಲ್ಲಿ ಕನ್ನಡವನ್ನು ಬಳಸುವಂತೆ ಮನವೊಲಿಸಲಾಗುವುದು. ಖಾಸಗಿ ಕಂಪೆನಿಗಳಲ್ಲಿ ಕನ್ನಡ ಅನುಷ್ಠಾನಗೊಳಿಸಲು ಉದ್ಯಮಿಗಳಾದ ಸುಧಾ ಮೂರ್ತಿ, ಅಜೀಂ ಪ್ರೇಮ್ಜಿ ಮುಂತಾದವರನ್ನು ಬಳಸಿಕೊಳ್ಳಲಾಗುವುದು ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>