ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂ.ವೀ.ಗೆ ನೃಪತುಂಗ ಪ್ರಶಸ್ತಿ

Last Updated 14 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: 2014ನೇ ಸಾಲಿನ ನೃಪ­ತುಂಗ ಪ್ರಶಸ್ತಿಗೆ ಸಾಹಿತಿ ಕುಂ. ವೀರಭದ್ರಪ್ಪ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಪುಂಡಲೀಕ ಹಾಲಂಬಿ ಪ್ರಕಟಿಸಿದರು.

ಪ್ರಶಸ್ತಿಯು ರೂ. 7,00,001 ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿಯನ್ನು ಡಿಸೆಂಬರ್‌ 12ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಗು­ವುದು ಎಂದು ಹಾಲಂಬಿ ಹೇಳಿದರು.

ಕನ್ನಡ ಸಾಹಿತ್ಯಕ್ಕೆ ನೀಡುವ ಮೌಲಿಕ ಕೊಡುಗೆ ಪರಿಗಣಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತಿವೆ. ಇದನ್ನು ಯಾವುದೇ ಕೃತಿಗೆ ನೀಡುವುದಿಲ್ಲ.

ನೃಪತುಂಗ ಪ್ರಶಸ್ತಿ ಪಡೆದವರ ಬದುಕು–ಬರಹ ಕುರಿತು ಡಿ. 17–18ರಂದು ಬೆಂಗಳೂರಿನಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದರು.
ಈ ಬಾರಿಯ ಶ್ರೀವಿಜಯ ಸಾಹಿತ್ಯ ಪ್ರಶಸ್ತಿ ಡಾ. ಕವಿತಾ ರೈ ಅವರಿಗೆ ಸಂದಿದೆ. ಇದನ್ನು ನ. 26ರಂದು ಸಾಹಿತ್ಯ ಪರಿ­ಷತ್ತಿಗೆ ಸಭಾಂಗಣದಲ್ಲಿ ಪ್ರದಾನ ಮಾಡ­ಲಾಗುವುದು. ಇದು ರೂ. 1,11,111 ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT