ಮೈಸೂರು: ಸಂಶೋಧಕ ಡಾ.ಎಂ.ಎಂ. ಕಲುಬರ್ಗಿ ಹತ್ಯೆಯನ್ನು ಖಂಡಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಸಾಹಿತಿ, ಇಲ್ಲಿನ ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಅರವಿಂದ ಮಾಲಗತ್ತಿ ರಾಜೀನಾಮೆ ನೀಡಿದ್ದಾರೆ.
ಭಾನುವಾರ ಬೆಳಿಗ್ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಶ್ವನಾಥ್ ಪ್ರಸಾದ್ ತಿವಾರಿ ಅವರಿಗೆ ಕಳುಹಿಸಿದ್ದಾರೆ. ಡಾ.ಎಂ.ಎಂ. ಕಲುಬುರ್ಗಿ ಅವರು ಹತ್ಯೆಯಾದ ಪ್ರಸಂಗ ಅಭಿವ್ಯಕ್ತಿಯ ಸ್ವಾತಂತ್ರ್ಯದ ಹರಣದ ಪ್ರತೀಕವಾಗಿದೆ. ಇದು ಕೇವಲ ಎಂ.ಎಂ. ಕಲಬುರ್ಗಿ ಅವರ ಹತ್ಯೆಯಲ್ಲ.