<p><strong>ಓಸ್ಲೊ (ಪಿಟಿಐ):</strong> ಭಾರತದ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಸ್ ಸತ್ಯಾರ್ಥಿ ಮತ್ತು ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳ ಯುವ ಹೋರಾಟಗಾರ್ತಿ ಮಲಾಲ ಯೂಸೂಫ್ಝೈ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ.</p>.<p>ಹದಿನೇಳು ವರ್ಷದ ಮಲಾಲ ನೊಬೆಲ್ ಶಾಂತಿ ಪುರಸ್ಕಾರ ಪಡೆಯುತ್ತಿರುವ ಅತ್ಯಂತ ಕಿರಿಯ ಸಾಧಕಿಯಾಗಿದ್ದಾರೆ. ಕೈಲಾಸ್ ಸತ್ಯಾರ್ಥಿ ಅವರು ‘ಬಚಪನ್ ಬಜಾವೊ’ ಆಂದೋಲನದ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ.</p>.<p>‘ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಿದ ಚಳವಳಿಗಾಗಿ ಕೈಲಾಸ್ ಮತ್ತು ಮಲಾಲ ಅವರಿಗೆ ಪುರಸ್ಕಾರ ನೀಡಲಾಗುತ್ತಿದೆ’ ಎಂದು ಆಯ್ಕೆ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>‘ಗಾಂಧೀವಾದಿಯಾಗಿರುವ ಕೈಲಾಸ್ ಸತ್ಯಾರ್ಥಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಳ್ಳಸಾಗಣೆ ತಡೆಗೆ ಆಂದೋಲನ ರೂಪಿಸಿದ್ದಾರೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲೆಲ್ಲಾ ಅವರು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ’ ಎಂದು ಸಮಿತಿ ಹೇಳಿದೆ.</p>.<p>‘ಮಲಾಲ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದನಿಯಾಗಿದ್ದಾರೆ. ಹಿಂದುಳಿದ ರಾಷ್ಟ್ರಗಳ ಹೆಣ್ಣು ಮಕ್ಕಳ ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಡುತ್ತಿರುವ ಮಲಾಲ ಅವರ ಕಾರ್ಯ ಪರಿಣಾಮಕಾರಿಯಾಗಿದೆ. ಅವರ ಚಳವಳಿಯಿಂದ ಹಲವು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರೆಯುವಂತಾಗಿದೆ’ ಎಂದು ಸಮಿತಿ ತಿಳಿಸಿದೆ.</p>.<p>‘ಕೈಲಾಸ್ ಮತ್ತು ಮಲಾಲ ಅವರನ್ನು ಶಾಂತಿ ಪುರಸ್ಕಾರಕ್ಕೆ ಜಂಟಿಯಾಗಿ ಆಯ್ಕೆ ಮಾಡಿರುವುದು ಒಬ್ಬ ಹಿಂದೂ– ಒಬ್ಬ ಮುಸ್ಲಿಂ ಹಾಗೂ ಒಬ್ಬ ಭಾರತೀಯ– ಒಬ್ಬ ಪಾಕಿಸ್ತಾನಿ ಒಂದೇ ವಿಷಯದ ಬಗ್ಗೆ ಹೋರಾಟ ನಡೆಸುತ್ತಿರುವುದನ್ನು ಗುರುತಿಸಿದಂತಾಗಿದೆ’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<p>‘ಈ ಪುರಸ್ಕಾರ ಮಕ್ಕಳ ಹಕ್ಕುಗಳ ಹೋರಾಟಕ್ಕೆ ಸಂದಿರುವ ಗೌರವ’ ಎಂದು ಕೈಲಾಸ್ ಸತ್ಯಾರ್ಥಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಓಸ್ಲೊ (ಪಿಟಿಐ):</strong> ಭಾರತದ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಸ್ ಸತ್ಯಾರ್ಥಿ ಮತ್ತು ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳ ಯುವ ಹೋರಾಟಗಾರ್ತಿ ಮಲಾಲ ಯೂಸೂಫ್ಝೈ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ.</p>.<p>ಹದಿನೇಳು ವರ್ಷದ ಮಲಾಲ ನೊಬೆಲ್ ಶಾಂತಿ ಪುರಸ್ಕಾರ ಪಡೆಯುತ್ತಿರುವ ಅತ್ಯಂತ ಕಿರಿಯ ಸಾಧಕಿಯಾಗಿದ್ದಾರೆ. ಕೈಲಾಸ್ ಸತ್ಯಾರ್ಥಿ ಅವರು ‘ಬಚಪನ್ ಬಜಾವೊ’ ಆಂದೋಲನದ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ.</p>.<p>‘ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಿದ ಚಳವಳಿಗಾಗಿ ಕೈಲಾಸ್ ಮತ್ತು ಮಲಾಲ ಅವರಿಗೆ ಪುರಸ್ಕಾರ ನೀಡಲಾಗುತ್ತಿದೆ’ ಎಂದು ಆಯ್ಕೆ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>‘ಗಾಂಧೀವಾದಿಯಾಗಿರುವ ಕೈಲಾಸ್ ಸತ್ಯಾರ್ಥಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಳ್ಳಸಾಗಣೆ ತಡೆಗೆ ಆಂದೋಲನ ರೂಪಿಸಿದ್ದಾರೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲೆಲ್ಲಾ ಅವರು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ’ ಎಂದು ಸಮಿತಿ ಹೇಳಿದೆ.</p>.<p>‘ಮಲಾಲ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದನಿಯಾಗಿದ್ದಾರೆ. ಹಿಂದುಳಿದ ರಾಷ್ಟ್ರಗಳ ಹೆಣ್ಣು ಮಕ್ಕಳ ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಡುತ್ತಿರುವ ಮಲಾಲ ಅವರ ಕಾರ್ಯ ಪರಿಣಾಮಕಾರಿಯಾಗಿದೆ. ಅವರ ಚಳವಳಿಯಿಂದ ಹಲವು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರೆಯುವಂತಾಗಿದೆ’ ಎಂದು ಸಮಿತಿ ತಿಳಿಸಿದೆ.</p>.<p>‘ಕೈಲಾಸ್ ಮತ್ತು ಮಲಾಲ ಅವರನ್ನು ಶಾಂತಿ ಪುರಸ್ಕಾರಕ್ಕೆ ಜಂಟಿಯಾಗಿ ಆಯ್ಕೆ ಮಾಡಿರುವುದು ಒಬ್ಬ ಹಿಂದೂ– ಒಬ್ಬ ಮುಸ್ಲಿಂ ಹಾಗೂ ಒಬ್ಬ ಭಾರತೀಯ– ಒಬ್ಬ ಪಾಕಿಸ್ತಾನಿ ಒಂದೇ ವಿಷಯದ ಬಗ್ಗೆ ಹೋರಾಟ ನಡೆಸುತ್ತಿರುವುದನ್ನು ಗುರುತಿಸಿದಂತಾಗಿದೆ’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<p>‘ಈ ಪುರಸ್ಕಾರ ಮಕ್ಕಳ ಹಕ್ಕುಗಳ ಹೋರಾಟಕ್ಕೆ ಸಂದಿರುವ ಗೌರವ’ ಎಂದು ಕೈಲಾಸ್ ಸತ್ಯಾರ್ಥಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>