ಕೋಲ್ಕತ್ತ(ಪಿಟಿಐ): ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿದು ಎಂಟು ಜನ ಮೃತಪಟ್ಟು, ಹಲವರು ಅವಶೇಷಗಳ ಅಡಿ ಸಿಲುಕಿರುವ ಘಟನೆ ಉತ್ತರ ಕೋಲ್ಕತ್ತದಲ್ಲಿ ಗುರುವಾರ ನಡೆದಿದೆ.
ಗಿರೀಶ್ ಉದ್ಯಾನ ಬಳಿಯ ಗಣೇಶ ಚಿತ್ರಮಂದಿರ ಸಮೀಪದ ವಿವೇಕಾನಂದ ಮೇಲ್ಸೇತುವೆ ಕುಸಿದಿದೆ.
ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣಾ ಕಾರ್ಯಾ ನಡೆಯುತ್ತಿದ್ದು, ಘಟನೆಯಲ್ಲಿ ಎಂಟು ಜನ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿ ಹಲವರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚಣೆಗೆ ಸೇನಾ ಸಿಬ್ಬಂದಿ ಕೈಜೋಡಿಸಿದ್ದಾರೆ.