<p><strong>ಬೆಂಗಳೂರು: </strong>‘ಕುವೆಂಪು ರಚಿಸಿರುವ ನಾಡಗೀತೆ ಒಳ್ಳೆಯ ಕವಿತೆಯಲ್ಲ ಎಂದು ಹೇಳುವ ಮೂಲಕ ಕವಿ ಮತ್ತು ಕನ್ನಡಿಗರಿಗೆ ವಿಮರ್ಶಕ ಸುಮತೀಂದ್ರ ನಾಡಿಗ್ ಅವಮಾನ ಮಾಡಿದ್ದಾರೆ. ನಾಡಿಗ್ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.<br /> <br /> ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಅಪ್ಪಾಜಿ ಗೌಡ, ‘ನಾಡಿಗ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.<br /> <br /> ‘80 ವರ್ಷ ದಾಟಿ ನಾಡಿಗ್ ಅವರು ಬುದ್ಧಿಭ್ರಮಣೆ ಆಗಿದೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಜಾತ್ಯತೀತ ನಿಲುವನ್ನು ಪ್ರತಿಪಾದಿಸುವ ನಾಡಗೀತೆ ವಿರುದ್ಧದ ಈ ಹೇಳಿಕೆ ಜಾತಿವಾದಿ ಮನಸ್ಥಿತಿಗೆ ಕನ್ನಡಿ ಹಿಡಿಯುತ್ತದೆ. ಅಲ್ಲದೆ, ಅಸಹಿಷ್ಣುತೆ ಕುರಿತ ಅವರ ಹೇಳಿಕೆಯೂ ಮತೀಯ ರಾಜಕೀಯ ಪಕ್ಷ ಹಾಗೂ ಸಂಘಟನೆ ಜತೆಗಿನ ಸಂಬಂಧವನ್ನು ರುಜುವಾತು ಪಡಿಸುತ್ತದೆ. ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಬಾರದು’ ಎಂದು ಮನವಿ ಮಾಡಿದರು.</p>.<p><strong>ಸ್ಮಾರಕಕ್ಕೆ ಭರವಸೆ</strong><br /> ಮಾಗಡಿಯಲ್ಲಿ ಕೆಂಪೇಗೌಡ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಭರವಸೆ ನೀಡಿದೆ. ಒಂದು ವೇಳೆ ಸರ್ಕಾರ ಕೈಬಿಟ್ಟರೆ, ಸಂಘವು ಸಮುದಾಯದ ಜನರಿಂದ ಹಣ ಸಂಗ್ರಹಿಸಿ ಸ್ಮಾರಕ ನಿರ್ಮಾಣ ಮಾಡುತ್ತದೆ.ಎಂದು ಅಪ್ಪಾಜಿ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕುವೆಂಪು ರಚಿಸಿರುವ ನಾಡಗೀತೆ ಒಳ್ಳೆಯ ಕವಿತೆಯಲ್ಲ ಎಂದು ಹೇಳುವ ಮೂಲಕ ಕವಿ ಮತ್ತು ಕನ್ನಡಿಗರಿಗೆ ವಿಮರ್ಶಕ ಸುಮತೀಂದ್ರ ನಾಡಿಗ್ ಅವಮಾನ ಮಾಡಿದ್ದಾರೆ. ನಾಡಿಗ್ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.<br /> <br /> ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಅಪ್ಪಾಜಿ ಗೌಡ, ‘ನಾಡಿಗ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.<br /> <br /> ‘80 ವರ್ಷ ದಾಟಿ ನಾಡಿಗ್ ಅವರು ಬುದ್ಧಿಭ್ರಮಣೆ ಆಗಿದೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಜಾತ್ಯತೀತ ನಿಲುವನ್ನು ಪ್ರತಿಪಾದಿಸುವ ನಾಡಗೀತೆ ವಿರುದ್ಧದ ಈ ಹೇಳಿಕೆ ಜಾತಿವಾದಿ ಮನಸ್ಥಿತಿಗೆ ಕನ್ನಡಿ ಹಿಡಿಯುತ್ತದೆ. ಅಲ್ಲದೆ, ಅಸಹಿಷ್ಣುತೆ ಕುರಿತ ಅವರ ಹೇಳಿಕೆಯೂ ಮತೀಯ ರಾಜಕೀಯ ಪಕ್ಷ ಹಾಗೂ ಸಂಘಟನೆ ಜತೆಗಿನ ಸಂಬಂಧವನ್ನು ರುಜುವಾತು ಪಡಿಸುತ್ತದೆ. ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಬಾರದು’ ಎಂದು ಮನವಿ ಮಾಡಿದರು.</p>.<p><strong>ಸ್ಮಾರಕಕ್ಕೆ ಭರವಸೆ</strong><br /> ಮಾಗಡಿಯಲ್ಲಿ ಕೆಂಪೇಗೌಡ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಭರವಸೆ ನೀಡಿದೆ. ಒಂದು ವೇಳೆ ಸರ್ಕಾರ ಕೈಬಿಟ್ಟರೆ, ಸಂಘವು ಸಮುದಾಯದ ಜನರಿಂದ ಹಣ ಸಂಗ್ರಹಿಸಿ ಸ್ಮಾರಕ ನಿರ್ಮಾಣ ಮಾಡುತ್ತದೆ.ಎಂದು ಅಪ್ಪಾಜಿ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>