ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ದೇವರದಾಸಿಮಯ್ಯ ವಚನಕಾರನೇ ಅಲ್ಲ ಜೇಡರ ದಾಸಿಮಯ್ಯ ಆದ್ಯ ವಚನಕಾರ’ ಎಂದು ಚಿದಾನಂದ ಮೂರ್ತಿ, ವಕೀಲೆ ಪ್ರಮೀಳಾ ನೇಸರ್ಗಿ, ಡಾ.ಎಸ್. ವಿದ್ಯಾಶಂಕರ ಮತ್ತಿತರರು ಗದ್ದಲ ಸೃಷ್ಟಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ಹೊರಗೆ ಕರೆದೊಯ್ದರು.