<p><span style="font-size: 26px;"><strong>ನವದೆಹಲಿ: </strong>ರಾಜ್ಯದ ಲೇಖಕರು ಮತ್ತು ಚಿಂತಕರ ವಲಯದಲ್ಲಿ ತೀವ್ರ ವಾದ-ವಿವಾದ ಹುಟ್ಟುಹಾಕಿದ್ದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ `ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿಶ್ವವಿದ್ಯಾಲಯ'ಕ್ಕೆ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಅಧ್ಯಕ್ಷ ಪ್ರೊ. ಸುಖದೇವ್ ಥೋರಟ್ ನೇತೃತ್ವದ ತಜ್ಞರ ಸಮಿತಿ `ಕೆಂಪು ಸಂಕೇತ' ತೋರಿಸಿದೆ.</span><br /> <br /> ಶ್ರೀರಂಗಪಟ್ಟಣದ ಟಿಪ್ಪುಸುಲ್ತಾನ್ ವಿವಿ ಒಳಗೊಂಡಂತೆ ದೇಶದಾದ್ಯಂತ ಐದು ಅಲ್ಪಸಂಖ್ಯಾತ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಿದ್ದ ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯ, ಈ ಬಗ್ಗೆ ಅಧ್ಯಯನ ನಡೆಸಿ ವರದಿ ಕೊಡಲು ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ಶಿಕ್ಷಣ- ಕಾನೂನು ತಜ್ಞರ ಸಮಿತಿ ನೇಮಿಸಿತ್ತು. ಹೊಸ ವಿವಿಗಳ ಸ್ವರೂಪ, ಪಠ್ಯಕ್ರಮ ಹಾಗೂ ಯಾವ್ಯಾವ ಸ್ಥಳಗಳಲ್ಲಿ ಸ್ಥಾಪನೆ ಮಾಡಬಹುದೆಂಬ ಅಂಶಗಳನ್ನು ಕುರಿತು ಪರಿಶೀಲಿಸುವಂತೆ ಸಮಿತಿಗೆ ಕೇಳಲಾಗಿತ್ತು.<br /> <br /> ಆದರೆ, `ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸಂವಿಧಾನದಲ್ಲಿ ಅವಕಾಶವಿಲ್ಲ' ಎಂದು ಥೋರಟ್ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಹೇಳಿದೆ. ಆದರೆ, `ಕೇಂದ್ರೀಯ ವಿವಿ'ಗಳನ್ನು ತೆರೆದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವೇಶದಲ್ಲಿ ಆದ್ಯತೆ ಕೊಡಬಹುದೆಂದು ಅಭಿಪ್ರಾಯ ಪಟ್ಟಿದೆ. ಈ ವರದಿಯಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ. ರೆಹಮಾನ್ ಖಾನ್ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.<br /> <br /> ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿವಿ ಸ್ಥಾಪನೆ ಮಾಡುವುದಾಗಿ ಸಚಿವ ರೆಹಮಾನ್ ಖಾನ್ ಪ್ರಕಟಿಸುತ್ತಿದ್ದಂತೆ ಹಿರಿಯ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ತೀವ್ರವಾಗಿ ವಿರೋಧಿಸಿದ್ದರು. ಖ್ಯಾತ ಲೇಖಕರಾದ ಡಾ.ಯು.ಆರ್. ಅನಂತಮೂರ್ತಿ, ಪ್ರೊ. ಬರಗೂರು ರಾಮಚಂದ್ರಪ್ಪ ಟಿಪ್ಪು ವಿವಿ ಪರ ದನಿ ಎತ್ತಿದ್ದರು. `ಎಷ್ಟೇ ವಿರೋಧ ಬಂದರೂ ಈ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ' ಎಂದು ರೆಹಮಾನ್ ಖಾನ್ ಘೋಷಿಸಿದ್ದರು.<br /> ಸಂವಿಧಾನದ ಕಲಂ 30 (1) ರ ಅನ್ವಯ, ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ಇಚ್ಛೆಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಹಕ್ಕಿದೆ. ಆದರೆ, ಸರ್ಕಾರ ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರ ಶಾಲೆ ಇಲ್ಲವೆ ಸಂಸ್ಥೆಗಳು ಎನ್ನುವ ಕಾರಣಕ್ಕೆ ಅನುದಾನ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ.<br /> <br /> ಅಲ್ಪಸಂಖ್ಯಾತ ಸಮುದಾಯಕ್ಕೆ ಶಿಕ್ಷಣ ಕೊಡುವ ಉದ್ದೇಶದಿಂದ ಆರಂಭಿಸಲಾಗಿರುವ ಅಲಿಗಡ ಮುಸ್ಲಿಂ ವಿವಿ ಹಾಗೂ ದೆಹಲಿಯ ಜಾಮಿಯ ಮಿಲಿಯ ವಿವಿಗೆ ಸಂಸತ್ತಿನಲ್ಲಿ ಕಾಯ್ದೆಗಳನ್ನು ಮಾಡುವ ಮೂಲಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗಿದೆ. ಆದರೆ, ಈ ಕ್ರಮವನ್ನು ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ಗಳಲ್ಲಿ ಪ್ರಶ್ನಿಸಲಾಗಿದೆ.<br /> <br /> <strong>ಕೇಂದ್ರೀಯ ವಿವಿ ಸ್ಥಾಪನೆಗೆ ಸಲಹೆ: </strong>ಐದು `ಕೇಂದ್ರೀಯ ವಿವಿ'ಗಳನ್ನು ಮುಸ್ಲಿಮರು, ಕ್ರೈಸ್ತರು ಹಾಗೂ ಬೌದ್ಧರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸ್ಥಳಗಳಲ್ಲಿ ತೆರೆಯಬಹುದೆಂದು ಥೋರಟ್ ಸಮಿತಿ ಹೇಳಿದೆ. `ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಸೂಚಿಸುವ ಮೂಲಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಬಹುದೇ?' ಎಂಬ ಸಂಗತಿಯನ್ನು ಪರಿಶೀಲಿಸುವ ಕೆಲಸವನ್ನು ಸಮಿತಿ ಮಾಡಿಲ್ಲ. `ಇದು ಸಮಿತಿಯ ಅಧಿಕಾರ ವ್ಯಾಪ್ತಿಯಲ್ಲಿ ಇರಲಿಲ್ಲ' ಎಂದು ಸಮಿತಿ ಮೂಲಗಳು ಖಚಿತಪಡಿಸಿವೆ.<br /> <br /> ಕೇಂದ್ರೀಯ ವಿವಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರವೇಶ ನೀಡುವಾಗ ನಿಯಮಗಳನ್ನು ಸಡಿಲಿಸಬಹುದು. ಪ್ರವೇಶ ಪರೀಕ್ಷೆಗಳಲ್ಲಿ ಹೆಚ್ಚುವರಿ ಅಂಕ ಕೊಡಬಹುದು. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮಹಿಳೆಯರು ಹಾಗೂ ಹಿಂದುಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ರೀತಿ ವಿಶೇಷ ಸೌಲಭ್ಯಗಳಿವೆ ಎಂದು ಸಮಿತಿ ಸ್ಪಷ್ಟಪಡಿಸಿದೆ.<br /> <br /> ಬೇಕಾದರೆ ಕೇಂದ್ರೀಯ ವಿವಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸಾಮಾಜಿಕ- ಆರ್ಥಿಕ ಸ್ಥಿತಿಗತಿ ಕುರಿತ ಅಧ್ಯಯನಕ್ಕೆ ಪ್ರತ್ಯೇಕ ವಿಭಾಗ ತೆರೆಯಬಹುದು ಎಂದು ಸಮಿತಿ ಹೇಳಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರು ವರ್ಷದ ಹಿಂದೆಯೇ ಅಲ್ಪಸಂಖ್ಯಾತ ವಿವಿ ಸ್ಥಾಪನೆಗೆ ಮುಂದಾಗಿತ್ತು. ಆದರೆ, ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಾನವ ಸಂಪನ್ಮೂಲ ಸಚಿವಾಲಯ ಅಭಿಪ್ರಾಯಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ನವದೆಹಲಿ: </strong>ರಾಜ್ಯದ ಲೇಖಕರು ಮತ್ತು ಚಿಂತಕರ ವಲಯದಲ್ಲಿ ತೀವ್ರ ವಾದ-ವಿವಾದ ಹುಟ್ಟುಹಾಕಿದ್ದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ `ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿಶ್ವವಿದ್ಯಾಲಯ'ಕ್ಕೆ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಅಧ್ಯಕ್ಷ ಪ್ರೊ. ಸುಖದೇವ್ ಥೋರಟ್ ನೇತೃತ್ವದ ತಜ್ಞರ ಸಮಿತಿ `ಕೆಂಪು ಸಂಕೇತ' ತೋರಿಸಿದೆ.</span><br /> <br /> ಶ್ರೀರಂಗಪಟ್ಟಣದ ಟಿಪ್ಪುಸುಲ್ತಾನ್ ವಿವಿ ಒಳಗೊಂಡಂತೆ ದೇಶದಾದ್ಯಂತ ಐದು ಅಲ್ಪಸಂಖ್ಯಾತ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಿದ್ದ ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯ, ಈ ಬಗ್ಗೆ ಅಧ್ಯಯನ ನಡೆಸಿ ವರದಿ ಕೊಡಲು ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ಶಿಕ್ಷಣ- ಕಾನೂನು ತಜ್ಞರ ಸಮಿತಿ ನೇಮಿಸಿತ್ತು. ಹೊಸ ವಿವಿಗಳ ಸ್ವರೂಪ, ಪಠ್ಯಕ್ರಮ ಹಾಗೂ ಯಾವ್ಯಾವ ಸ್ಥಳಗಳಲ್ಲಿ ಸ್ಥಾಪನೆ ಮಾಡಬಹುದೆಂಬ ಅಂಶಗಳನ್ನು ಕುರಿತು ಪರಿಶೀಲಿಸುವಂತೆ ಸಮಿತಿಗೆ ಕೇಳಲಾಗಿತ್ತು.<br /> <br /> ಆದರೆ, `ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸಂವಿಧಾನದಲ್ಲಿ ಅವಕಾಶವಿಲ್ಲ' ಎಂದು ಥೋರಟ್ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಹೇಳಿದೆ. ಆದರೆ, `ಕೇಂದ್ರೀಯ ವಿವಿ'ಗಳನ್ನು ತೆರೆದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವೇಶದಲ್ಲಿ ಆದ್ಯತೆ ಕೊಡಬಹುದೆಂದು ಅಭಿಪ್ರಾಯ ಪಟ್ಟಿದೆ. ಈ ವರದಿಯಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ. ರೆಹಮಾನ್ ಖಾನ್ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.<br /> <br /> ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿವಿ ಸ್ಥಾಪನೆ ಮಾಡುವುದಾಗಿ ಸಚಿವ ರೆಹಮಾನ್ ಖಾನ್ ಪ್ರಕಟಿಸುತ್ತಿದ್ದಂತೆ ಹಿರಿಯ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ತೀವ್ರವಾಗಿ ವಿರೋಧಿಸಿದ್ದರು. ಖ್ಯಾತ ಲೇಖಕರಾದ ಡಾ.ಯು.ಆರ್. ಅನಂತಮೂರ್ತಿ, ಪ್ರೊ. ಬರಗೂರು ರಾಮಚಂದ್ರಪ್ಪ ಟಿಪ್ಪು ವಿವಿ ಪರ ದನಿ ಎತ್ತಿದ್ದರು. `ಎಷ್ಟೇ ವಿರೋಧ ಬಂದರೂ ಈ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ' ಎಂದು ರೆಹಮಾನ್ ಖಾನ್ ಘೋಷಿಸಿದ್ದರು.<br /> ಸಂವಿಧಾನದ ಕಲಂ 30 (1) ರ ಅನ್ವಯ, ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ಇಚ್ಛೆಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಹಕ್ಕಿದೆ. ಆದರೆ, ಸರ್ಕಾರ ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರ ಶಾಲೆ ಇಲ್ಲವೆ ಸಂಸ್ಥೆಗಳು ಎನ್ನುವ ಕಾರಣಕ್ಕೆ ಅನುದಾನ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ.<br /> <br /> ಅಲ್ಪಸಂಖ್ಯಾತ ಸಮುದಾಯಕ್ಕೆ ಶಿಕ್ಷಣ ಕೊಡುವ ಉದ್ದೇಶದಿಂದ ಆರಂಭಿಸಲಾಗಿರುವ ಅಲಿಗಡ ಮುಸ್ಲಿಂ ವಿವಿ ಹಾಗೂ ದೆಹಲಿಯ ಜಾಮಿಯ ಮಿಲಿಯ ವಿವಿಗೆ ಸಂಸತ್ತಿನಲ್ಲಿ ಕಾಯ್ದೆಗಳನ್ನು ಮಾಡುವ ಮೂಲಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗಿದೆ. ಆದರೆ, ಈ ಕ್ರಮವನ್ನು ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ಗಳಲ್ಲಿ ಪ್ರಶ್ನಿಸಲಾಗಿದೆ.<br /> <br /> <strong>ಕೇಂದ್ರೀಯ ವಿವಿ ಸ್ಥಾಪನೆಗೆ ಸಲಹೆ: </strong>ಐದು `ಕೇಂದ್ರೀಯ ವಿವಿ'ಗಳನ್ನು ಮುಸ್ಲಿಮರು, ಕ್ರೈಸ್ತರು ಹಾಗೂ ಬೌದ್ಧರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸ್ಥಳಗಳಲ್ಲಿ ತೆರೆಯಬಹುದೆಂದು ಥೋರಟ್ ಸಮಿತಿ ಹೇಳಿದೆ. `ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಸೂಚಿಸುವ ಮೂಲಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಬಹುದೇ?' ಎಂಬ ಸಂಗತಿಯನ್ನು ಪರಿಶೀಲಿಸುವ ಕೆಲಸವನ್ನು ಸಮಿತಿ ಮಾಡಿಲ್ಲ. `ಇದು ಸಮಿತಿಯ ಅಧಿಕಾರ ವ್ಯಾಪ್ತಿಯಲ್ಲಿ ಇರಲಿಲ್ಲ' ಎಂದು ಸಮಿತಿ ಮೂಲಗಳು ಖಚಿತಪಡಿಸಿವೆ.<br /> <br /> ಕೇಂದ್ರೀಯ ವಿವಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರವೇಶ ನೀಡುವಾಗ ನಿಯಮಗಳನ್ನು ಸಡಿಲಿಸಬಹುದು. ಪ್ರವೇಶ ಪರೀಕ್ಷೆಗಳಲ್ಲಿ ಹೆಚ್ಚುವರಿ ಅಂಕ ಕೊಡಬಹುದು. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮಹಿಳೆಯರು ಹಾಗೂ ಹಿಂದುಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ರೀತಿ ವಿಶೇಷ ಸೌಲಭ್ಯಗಳಿವೆ ಎಂದು ಸಮಿತಿ ಸ್ಪಷ್ಟಪಡಿಸಿದೆ.<br /> <br /> ಬೇಕಾದರೆ ಕೇಂದ್ರೀಯ ವಿವಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸಾಮಾಜಿಕ- ಆರ್ಥಿಕ ಸ್ಥಿತಿಗತಿ ಕುರಿತ ಅಧ್ಯಯನಕ್ಕೆ ಪ್ರತ್ಯೇಕ ವಿಭಾಗ ತೆರೆಯಬಹುದು ಎಂದು ಸಮಿತಿ ಹೇಳಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರು ವರ್ಷದ ಹಿಂದೆಯೇ ಅಲ್ಪಸಂಖ್ಯಾತ ವಿವಿ ಸ್ಥಾಪನೆಗೆ ಮುಂದಾಗಿತ್ತು. ಆದರೆ, ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಾನವ ಸಂಪನ್ಮೂಲ ಸಚಿವಾಲಯ ಅಭಿಪ್ರಾಯಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>