ಬೆಂಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ 12 ರಿಂದ 15ರವರೆಗೆ ವಿಜಯಪುರದಲ್ಲಿ ನಡೆಯಲಿರುವ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಂಶೋಧಕ ಡಾ.ಎಸ್. ಆರ್. ಗುಂಜಾಳ ಅವರು ಆಯ್ಕೆಯಾಗಿದ್ದಾರೆ.
ಕಲಬುರ್ಗಿ ವಿ.ವಿ ಗ್ರಂಥಾಲಯ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವ ಗುಂಜಾಳ ಅವರು, ಸುಮಾರು 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.