ಗುಲ್ಬರ್ಗ: ಇಲ್ಲಿನ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದ ‘ವೈದ್ಯಶ್ರೀ ಪ್ರಶಸ್ತಿ’ಗೆ ಈ ಬಾರಿ ಬೆಂಗಳೂರಿನ ಹೃದಯರೋಗ ತಜ್ಞರಾದ ಡಾ.ವಿವೇಕ ಜವಳಿ ಅವರು ಭಾಜನರಾಗಿದ್ದಾರೆ.
2015ರ ಜನವರಿ 1ರಂದು ಗುಲ್ಬರ್ಗದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₨ 10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಶಂಕರ ಪ್ರತಿಷ್ಠಾನದ ಕಾರ್ಯದರ್ಶಿ ಎಸ್.ಎಸ್.ಹಿರೇಮಠ ತಿಳಿಸಿದ್ದಾರೆ.