ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಸಿ.ಎನ್.ರಾಮಚಂದ್ರನ್, ಸತ್ಯನಾರಾಯಣ ರಾವ್‌ಗೆ ಪ್ರಶಸ್ತಿ

Last Updated 20 ಏಪ್ರಿಲ್ 2016, 19:44 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ಕರ್ನಾಟಕ ಸಂಘದ ವತಿಯಿಂದ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರೊ.ತೀ.ನಂ. ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಹೆಸರಾಂತ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್‌ ಅವರಿಗೆ, ಡಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಕವಿ, ನಾಟಕಕಾರ ಪ್ರೊ. ಸತ್ಯನಾರಾಯಣ ರಾವ್ ಅಣತಿ ಅವರಿಗೆ ಪ್ರಕಟಿಸಲಾಗಿದೆ.

ಏ. 23ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಹೊಂದಿದೆ. ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮೈಸೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಯು.ಎಚ್. ಗಣೇಶ್, ವಿಮರ್ಶಕ ಪ್ರೊ.ಟಿ.ಪಿ.ಅಶೋಕ ಮಾತನಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ.ಡಿ.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT