ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ದಲಿತ ವಿದ್ಯಾರ್ಥಿಗಳ ಅಮಾನತು ರದ್ದು

Last Updated 21 ಜನವರಿ 2016, 12:15 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ):  ನಾಲ್ವರು ದಲಿತ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದ ಆದೇಶವನ್ನು ಹೈದರಾಬಾದ್‌ ವಿಶ್ವವಿದ್ಯಾಲಯ ಗುರುವಾರ ರದ್ದುಪಡಿಸಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದ ರೋಹಿತ್‌ ಜತೆಯಲ್ಲಿ ಈ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ನಂತರದ ಬೆಳವಣಿಗೆಗಳಲ್ಲಿ ರೋಹಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದರು.

ಶೇಷಯ್ಯ, ವಿಜಯಕುಮಾರ್‌, ಪ್ರಶಾಂತ್‌, ಸುಂಕಣ್ಣ ಅವರ ವಿರುದ್ಧದ ಆದೇಶವನ್ನು ವಿಶ್ವವಿದ್ಯಾಲಯ ಹಿಂಪಡೆದಿದೆ. ಈ ವಿದ್ಯಾರ್ಥಿಗಳಿಗೆ ವಸತಿ ನಿಲಯ, ಗ್ರಂಥಾಲಯ ಸೌಲಭ್ಯವನ್ನು ನೀಡಿರಲಿಲ್ಲ.

ರಾಜಿನಾಮೆ?: ರೋಹಿತ್‌ ಹತ್ಯೆ ಖಂಡಿಸಿ ವಿಶ್ವವಿದ್ಯಾಲಯದ 10 ಕ್ಕೂ ಹೆಚ್ಚು ಅಧ್ಯಾಪಕರು ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಮುಷ್ಕರ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT