ಬೆಂಗಳೂರು: ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ 2014ರ ‘ಶಾ ಬಾಲೂ ರಾವ್ ಯುವ ಬರಹಗಾರ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಉಪ ಸಂಪಾದಕ ಪದ್ಮನಾಭ ಭಟ್ ಶೇವ್ಕಾರ್ ಅವರ ‘ಕೇಪಿನ ಡಬ್ಬಿ’ ಕಥಾ ಸಂಕಲನ ಆಯ್ಕೆಯಾಗಿದೆ.
ಪ್ರಶಸ್ತಿಯು ₹ 25 ಸಾವಿರ ನಗದು ಪುರಸ್ಕಾರ ಒಳಗೊಂಡಿದ್ದು, ಡಿಸೆಂಬರ್ 25ರಂದು ಪ್ರತಿಷ್ಠಾನದ ಎಂ.ವಿ.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಮಲಿನಿ ಬಾಲೂರಾವ್ ಅವರು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.