<p>ನವದೆಹಲಿ (ಐಎಎನ್ಎಸ್): ನಗರದಲ್ಲಿ ಮುಂಜಾನೆ ಬೈಸಿಕಲ್ ಸವಾರಿ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಪರಿಸರವಾದಿ ಸುನೀತಾ ನಾರಾಯಣ್ (52) ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.<br /> <br /> ವಿಜ್ಞಾನ ಮತ್ತು ಪರಿಸರ ಕೇಂದ್ರದ (ಸಿಎಸ್ಇ) ನಿರ್ದೇಶಕಿ ಹಾಗೂ ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದ ನಿವಾಸಿ, ಸುನೀತಾ ನಾರಾಯಣ್ ಅವರು ತಮ್ಮ ಬೈಸಿಕಲ್ ನಲ್ಲಿ ಸಾಗುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ಕಾರೊಂದು ಮುಂಜಾನೆ 6 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿತ್ತು.<br /> <br /> ಅಪಘಾತ ಸಂಭವಿಸುತ್ತಿದ್ದಂತೆಯೇ ಕಾರು ಚಾಲಕ ಘಟನಾ ಸ್ಥಳದಿಂದ ಪರಾರಿಯಾದ. ಸುನೀತಾ ನಾರಾಯಣ್ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.<br /> <br /> ಸುನೀತಾ ಅವರ ಎರಡೂ ತೋಳುಗಳಿಗೆ ತೀವ್ರ ಏಟು ಬಿದ್ದಿದ್ದು, ಎದೆ ಭಾಗಕ್ಕೂ ತೀವ್ರ ಗಾಯಗಳಾಗಿದೆ ಎಂದು ವೈದ್ಯರು ಹೇಳಿದರು.<br /> <br /> ಸುನೀತಾ ನಾರಾಯಣ್ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ದೃಢ ಪಡಿಸಿದ್ದು, ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಸ್ ಇ ಹೇಳಿಕೆ ತಿಳಿಸಿದೆ. ಸುನೀತಾ ಅವರ ಎರಡೂ ತೋಳುಗಳಿಗೆ ಟಿಟಾನಿಯಂ ಸರಳುಗಳನ್ನು ಅಳವಡಿಸಲಾಗಿದೆ ಎಂದೂ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ನಗರದಲ್ಲಿ ಮುಂಜಾನೆ ಬೈಸಿಕಲ್ ಸವಾರಿ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಪರಿಸರವಾದಿ ಸುನೀತಾ ನಾರಾಯಣ್ (52) ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.<br /> <br /> ವಿಜ್ಞಾನ ಮತ್ತು ಪರಿಸರ ಕೇಂದ್ರದ (ಸಿಎಸ್ಇ) ನಿರ್ದೇಶಕಿ ಹಾಗೂ ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದ ನಿವಾಸಿ, ಸುನೀತಾ ನಾರಾಯಣ್ ಅವರು ತಮ್ಮ ಬೈಸಿಕಲ್ ನಲ್ಲಿ ಸಾಗುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ಕಾರೊಂದು ಮುಂಜಾನೆ 6 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿತ್ತು.<br /> <br /> ಅಪಘಾತ ಸಂಭವಿಸುತ್ತಿದ್ದಂತೆಯೇ ಕಾರು ಚಾಲಕ ಘಟನಾ ಸ್ಥಳದಿಂದ ಪರಾರಿಯಾದ. ಸುನೀತಾ ನಾರಾಯಣ್ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.<br /> <br /> ಸುನೀತಾ ಅವರ ಎರಡೂ ತೋಳುಗಳಿಗೆ ತೀವ್ರ ಏಟು ಬಿದ್ದಿದ್ದು, ಎದೆ ಭಾಗಕ್ಕೂ ತೀವ್ರ ಗಾಯಗಳಾಗಿದೆ ಎಂದು ವೈದ್ಯರು ಹೇಳಿದರು.<br /> <br /> ಸುನೀತಾ ನಾರಾಯಣ್ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ದೃಢ ಪಡಿಸಿದ್ದು, ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಸ್ ಇ ಹೇಳಿಕೆ ತಿಳಿಸಿದೆ. ಸುನೀತಾ ಅವರ ಎರಡೂ ತೋಳುಗಳಿಗೆ ಟಿಟಾನಿಯಂ ಸರಳುಗಳನ್ನು ಅಳವಡಿಸಲಾಗಿದೆ ಎಂದೂ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>