ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಮಾನಕ್ಕೆ ಕೃತಿಗಳ ಆಹ್ವಾನ

Last Updated 9 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2013ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2013ರ ಜನವರಿ 1ರಿಂದ ಡಿಸೆಂಬರ್‌ 31ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು.

ಕಾವ್ಯ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಆತ್ಮಕತೆ, ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ಅನುವಾದ ಮತ್ತು ಸಂಕೀರ್ಣ ವಿಭಾಗಗಳಲ್ಲಿ ಒಂದೊಂದು ಕೃತಿಗೆ ಬಹುಮಾನ ನೀಡಲಾಗುತ್ತದೆ.

ಲೇಖಕರ ಮೊದಲ ಸ್ವತಂತ್ರ ಕೃತಿಗೆ  ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದಗೊಂಡ ಕೃತಿಗೆ ತಲಾ ₨5 ಸಾವಿರ ವಿಶೇಷ ಬಹುಮಾನ ನೀಡಲಾಗುತ್ತದೆ.

ಪುಸ್ತಕ ಕಳುಹಿಸಲು 2015 ಜ.31 ಕಡೆಯ ದಿನ. ವಿಳಾಸ: ರಿಜಿಸ್ಟ್ರಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು–560002. ಮಾಹಿತಿಗೆ: 080–2221 1730

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT