‘ಮತದಾರರ ತೀರ್ಪಿಗೆ ತಲೆಬಾಗುವುದಾಗಿ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಸ್ವಚ್ಛ ಮತ್ತು ಸಂಚಾರ ದಟ್ಟಣೆ ಮುಕ್ತ ನಗರ, ಉತ್ತಮ ನಾಗರಿಕ ಸೌಲಭ್ಯ, ಜನಸ್ನೇಹಿ ಆಡಳಿತಕ್ಕಾಗಿ ನಾವು ಬಿಬಿಎಂಪಿಯನ್ನು ವಿಭಜಿಸಬೇಕು ಎನ್ನುತ್ತಿದ್ದೇವೆ ಹೊರತು, ಚುನಾವಣೆ ಭಯದಿಂದ ಅಲ್ಲ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಮತದಾರರ ತೀರ್ಪನ್ನು ಗೌರವಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.