ಕೊಳ್ಳೇಗಾಲ: ಜುಲೈ ಮೊದಲ ವಾರದಲ್ಲೇ ಭೋರ್ಗರೆದು ಧುಮ್ಮಿಕ್ಕುತ್ತಿದ್ದ ಭರಚುಕ್ಕಿ ಮತ್ತು ಗಗನಚುಕ್ಕಿ ಜಲಪಾತಗಳು ನೀರಿಲ್ಲದೆ ಭಣಗುಡುತ್ತಿವೆ.
ಕಾವೇರಿ ಕೊಳ್ಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಆದರೆ, ಕಾವೇರಿ ಮತ್ತು ಕಬಿನಿ ಜಲಾಶಯಗಳು ಇನ್ನೂ ಭರ್ತಿಯಾಗದ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯದ ಕಾರಣ ಸಾವಿರಾರು ಪ್ರವಾಸಿಗರ ಆಕರ್ಷಣೆಯ ತಾಣವಾದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ನೀರಿಲ್ಲದೆ ಒಣಗಿವೆ.
ಇದು ಪ್ರವಾಸಿಗರಲ್ಲಿ ನಿರಾಸೆ ಮೂಡಿಸಿದೆ. ಜಲಪಾತದಲ್ಲಿ ನೀರು ಧುಮ್ಮಿಕ್ಕುವ ದಿನಗಳಿಗೆ ಕಾಯುವಂತಾಗಿದೆ.