<p><strong>ನವದೆಹಲಿ(ಪಿಟಿಐ): </strong>ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಚರ್ಚೆ ವೇಳೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿ ಕೋಲಾಹಲ ಸೃಷ್ಟಿಯಾಯಿತು.<br /> <br /> ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎಡ ಪಕ್ಷಗಳಾದ ಟಿಎಂಸಿ, ಎಸ್ಪಿ, ಆರ್ ಜೆಡಿ ಸದಸ್ಯರು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ರಾಜೀವ್ ಪ್ರತಾಪ್ ರೂಡಿ ಅವರತ್ತ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಮಸೂದೆ ಹಿಂದಕ್ಕೆ ಪಡೆಯಬೇಕು’. ‘ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ’. ‘ರೈತ ವಿರೋಧಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಘೋಷಣೆ ಕೂಗಿದರು.<br /> <br /> ಪ್ರಮುಖರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಆರ್ ಜೆಡಿ ಮುಖಂಡ ಮುಲಾಯಂ ಸಿಂಗ್ ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸೇರಿದಂತೆ ವಿರೋಧ ಪಕ್ಷದ ಮುಖಂಡರು ಸದನದಲ್ಲಿ ಉಪಸ್ಥಿತರಿದ್ದರು.<br /> <br /> ಕಾಂಗ್ರೆಸ್ ನ ಜ್ಯೋತಿರಾದಿತ್ಯ ಸಿಂಧಿಯಾ, ಕೆ.ಸಿ. ವೇಣುಗೋಪಾಲ್ ಮತ್ತು ಗೌರವ್ ಗೊಗೊಯ್, ಆರ್ ಜೆಡಿಯ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.<br /> <br /> ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದರು. ಈ ವೇಳೆ ಸ್ಪೀಕರ್ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಸೈನಾ ನೆಹ್ವಾಲ್ ಹಾಗೂ ಸಾನಿಯಾ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ಸದನದ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಿದರು.<br /> <br /> ಇದೇ ವೇಳೆ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿ, ಯೆಮನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆ ತಂದಿರುವ ಬಗ್ಗೆ ಪ್ರಸ್ತಾಪಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮುಂದುವರಿಸಿದರು. ಹೀಗಾಗಿ, ಸಭಾಧ್ಯಕ್ಷರು ಸದನದ ಕಲಾಪದನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ): </strong>ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಚರ್ಚೆ ವೇಳೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿ ಕೋಲಾಹಲ ಸೃಷ್ಟಿಯಾಯಿತು.<br /> <br /> ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎಡ ಪಕ್ಷಗಳಾದ ಟಿಎಂಸಿ, ಎಸ್ಪಿ, ಆರ್ ಜೆಡಿ ಸದಸ್ಯರು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ರಾಜೀವ್ ಪ್ರತಾಪ್ ರೂಡಿ ಅವರತ್ತ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಮಸೂದೆ ಹಿಂದಕ್ಕೆ ಪಡೆಯಬೇಕು’. ‘ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ’. ‘ರೈತ ವಿರೋಧಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಘೋಷಣೆ ಕೂಗಿದರು.<br /> <br /> ಪ್ರಮುಖರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಆರ್ ಜೆಡಿ ಮುಖಂಡ ಮುಲಾಯಂ ಸಿಂಗ್ ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸೇರಿದಂತೆ ವಿರೋಧ ಪಕ್ಷದ ಮುಖಂಡರು ಸದನದಲ್ಲಿ ಉಪಸ್ಥಿತರಿದ್ದರು.<br /> <br /> ಕಾಂಗ್ರೆಸ್ ನ ಜ್ಯೋತಿರಾದಿತ್ಯ ಸಿಂಧಿಯಾ, ಕೆ.ಸಿ. ವೇಣುಗೋಪಾಲ್ ಮತ್ತು ಗೌರವ್ ಗೊಗೊಯ್, ಆರ್ ಜೆಡಿಯ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.<br /> <br /> ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದರು. ಈ ವೇಳೆ ಸ್ಪೀಕರ್ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಸೈನಾ ನೆಹ್ವಾಲ್ ಹಾಗೂ ಸಾನಿಯಾ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ಸದನದ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಿದರು.<br /> <br /> ಇದೇ ವೇಳೆ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿ, ಯೆಮನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆ ತಂದಿರುವ ಬಗ್ಗೆ ಪ್ರಸ್ತಾಪಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮುಂದುವರಿಸಿದರು. ಹೀಗಾಗಿ, ಸಭಾಧ್ಯಕ್ಷರು ಸದನದ ಕಲಾಪದನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>