ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೂದೆ ತಿದ್ದುಪಡಿ: ಒತ್ತಡಕ್ಕೆ ಮಣಿದ ಸರ್ಕಾರ

Last Updated 10 ಮಾರ್ಚ್ 2015, 10:16 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಬಿಜೆಪಿ ಸರ್ಕಾರ ಕೊನೆಗೂ ವಿವಾದಿತ ಭೂಸ್ವಾಧೀನ ಮಸೂದೆಗೆ ಅಗತ್ಯ ತಿದ್ದುಪಡಿಗಳನ್ನು ಮಾಡುವುದಾಗಿ ಮಂಗಳವಾರ ಲೋಕಸಭೆಗೆ ತಿಳಿಸಿತು.

ರೈತರು ಮತ್ತು ಕೃಷಿ ವಲಯದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ರಾಜಕೀಯ ಮುಖಂಡರು, ರೈತ ಸಂಘಟನೆಗಳು ಹಾಗೂ ಕೃಷಿ ಸಂಬಂಧಿತ ಸಂಘ-ಸಂಸ್ಥೆಗಳ ಸಲಹೆಗಳನ್ನು ಪರಿಗಣಿಸಿ ಅಗತ್ಯ ಬದಲಾವಣೆ ಮಾಡಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬಿರೇಂದ್ರರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

‘ಕೈಗಾರಿಕಾ ಕಾರಿಡಾರ್ ಯೋಜನೆ’ಗಳಿಗೆ ಭೂ ಸ್ವಾಧೀನ ಮಿತಿಗೊಳಿಸುವುದು ಸೇರಿದಂತೆ ವಿವಿಧ ಒಂಬತ್ತು ಮಸೂದೆಗಳಲ್ಲಿನ ತಿದ್ದುಪಡಿ ಪ್ರಸ್ತಾವಗಳನ್ನು ಸರ್ಕಾರ ಪರಿಗಣಿಸಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT