<p><strong>ಔರಂಗಾಬಾದ್, ಮಹಾರಾಷ್ಟ್ರ (ಪಿಟಿಐ): </strong>ಆಲಿಕಲ್ಲು ಮಳೆಯಿಂದ ಆದ ಬೆಳೆಹಾನಿಗೆ ಬೇಸತ್ತು ಮರಾಠವಾಡ ಪ್ರಾಂತ್ಯದಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆಹಾನಿಗೆ ಬೇಸತ್ತು ವಾರವೊಂದರಲ್ಲಿಯೇ ಇಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 13ಕ್ಕೆ ಏರಿದೆ.<br /> <br /> ಪರ್ಭನಿ ಜಿಲ್ಲೆಯ ನಂದಗಾಂವ್್ ಬದ್ರುಕ್ನ 45 ವರ್ಷದ ರೈತ ನಾರಾಯಣ ಕಾಳೆ ದುಢ್ನಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ₨25,000 ಸಾಲ ಮಾಡಿದ್ದರು. ಆದರೆ, ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> ಬೀಡ್ ಜಿಲ್ಲೆಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಾಠವಾಡ ಪ್ರಾಂತ್ಯದ ಎಂಟು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆನಾಶವಾಗಿದೆ.<br /> <br /> ಔರಂಗಾಬಾದ್, ಬೀಡ್, ಉಸ್ಮಾನಾಬಾದ್ ಹಾಗೂ ಹಿಂಗೋಲಿಯಲ್ಲಿ ಒಟ್ಟು 11 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.<br /> <br /> <strong>ಗರಿಷ್ಠ ಪರಿಹಾರದ ಭರವಸೆ</strong><br /> ಮುಂಬೈ ವರದಿ: ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ನಷ್ಟಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ನೀಡಲು ಎಲ್ಲಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದ್ದರಿಂದ ರೈತರು ಹತಾಶರಾಗಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಮನವಿ ಮಾಡಿದ್ದಾರೆ.<br /> <br /> ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗಿದ್ದರಿಂದ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಚವಾಣ್ ರೈತರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ.<br /> <br /> ರೈತರಿಗೆ ಆಗಿರುವ ಅಪಾರ ಹಾನಿಯ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ ಹಾಗೂ ಐದು ಸಾವಿರ ಕೋಟಿ ರೂಪಾಯಿಗಳ ಪ್ಯಾಕೇಜ್ ಸಿದ್ಧಪಡಿಸಿ ಕೇಂದ್ರದ ನೆರವು ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> <strong>ಹೈಕೋರ್ಟ್ಗೆ ರೈತರ ಮೊರೆ</strong><br /> ಮುಂಬೈ ವರದಿ: ಇತ್ತೀಚಿನ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಆಗಿರುವುದರಿಂದ 20 ಸಾವಿರ ಕೋಟಿ ರೂಪಾಯಿಗಳ ಪರಿಹಾರ ನೀಡುವಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಇಬ್ಬರು ರೈತರು ಬಾಂಬೈ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.<br /> <br /> ಸೊಲ್ಲಾಪುರ ಜಿಲ್ಲೆಯ ಗೊರಖ್ ಆನಂದ್ ಘಾಡ್ಗೆ ಮತ್ತು ವಿಠಲ್ ರಾವ್ ಪವಾರ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಾಬಾದ್, ಮಹಾರಾಷ್ಟ್ರ (ಪಿಟಿಐ): </strong>ಆಲಿಕಲ್ಲು ಮಳೆಯಿಂದ ಆದ ಬೆಳೆಹಾನಿಗೆ ಬೇಸತ್ತು ಮರಾಠವಾಡ ಪ್ರಾಂತ್ಯದಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆಹಾನಿಗೆ ಬೇಸತ್ತು ವಾರವೊಂದರಲ್ಲಿಯೇ ಇಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 13ಕ್ಕೆ ಏರಿದೆ.<br /> <br /> ಪರ್ಭನಿ ಜಿಲ್ಲೆಯ ನಂದಗಾಂವ್್ ಬದ್ರುಕ್ನ 45 ವರ್ಷದ ರೈತ ನಾರಾಯಣ ಕಾಳೆ ದುಢ್ನಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ₨25,000 ಸಾಲ ಮಾಡಿದ್ದರು. ಆದರೆ, ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> ಬೀಡ್ ಜಿಲ್ಲೆಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಾಠವಾಡ ಪ್ರಾಂತ್ಯದ ಎಂಟು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆನಾಶವಾಗಿದೆ.<br /> <br /> ಔರಂಗಾಬಾದ್, ಬೀಡ್, ಉಸ್ಮಾನಾಬಾದ್ ಹಾಗೂ ಹಿಂಗೋಲಿಯಲ್ಲಿ ಒಟ್ಟು 11 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.<br /> <br /> <strong>ಗರಿಷ್ಠ ಪರಿಹಾರದ ಭರವಸೆ</strong><br /> ಮುಂಬೈ ವರದಿ: ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ನಷ್ಟಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ನೀಡಲು ಎಲ್ಲಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದ್ದರಿಂದ ರೈತರು ಹತಾಶರಾಗಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಮನವಿ ಮಾಡಿದ್ದಾರೆ.<br /> <br /> ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗಿದ್ದರಿಂದ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಚವಾಣ್ ರೈತರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ.<br /> <br /> ರೈತರಿಗೆ ಆಗಿರುವ ಅಪಾರ ಹಾನಿಯ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ ಹಾಗೂ ಐದು ಸಾವಿರ ಕೋಟಿ ರೂಪಾಯಿಗಳ ಪ್ಯಾಕೇಜ್ ಸಿದ್ಧಪಡಿಸಿ ಕೇಂದ್ರದ ನೆರವು ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> <strong>ಹೈಕೋರ್ಟ್ಗೆ ರೈತರ ಮೊರೆ</strong><br /> ಮುಂಬೈ ವರದಿ: ಇತ್ತೀಚಿನ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಆಗಿರುವುದರಿಂದ 20 ಸಾವಿರ ಕೋಟಿ ರೂಪಾಯಿಗಳ ಪರಿಹಾರ ನೀಡುವಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಇಬ್ಬರು ರೈತರು ಬಾಂಬೈ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.<br /> <br /> ಸೊಲ್ಲಾಪುರ ಜಿಲ್ಲೆಯ ಗೊರಖ್ ಆನಂದ್ ಘಾಡ್ಗೆ ಮತ್ತು ವಿಠಲ್ ರಾವ್ ಪವಾರ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>