<p><strong>ಬೆಂಗಳೂರು/ಕೋಲಾರ್: </strong>ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ‘ಅಸಹಜ’ ಸಾವಿಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯಲ್ಲಿ ಮಂಗಳವಾರ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ. ಹೆದ್ದಾರಿ ತಡೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಅಲ್ಲದೇ, ಉದ್ರಿಕ್ತ ಪ್ರತಿಭಟನಾಕಾರರು ಸ್ಥಳೀಯ ಶಾಸಕ ವರ್ತೂರು ಪ್ರಕಾಶ್ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಮಧ್ಯೆ ಪ್ರವೇಶಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> <strong>ಸದನದಲ್ಲೂ ಪ್ರತಿಧ್ವನಿ:</strong> ವಿಧಾನಮಂಡಳದ ಬಜೆಟ್ ಅಧಿವೇಶನದಲ್ಲಿ ರವಿ ಅವರ ಸಾವಿಗೆ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ರವಿ ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.</p>.<p><strong>ಎಲ್ಲಾ ಕೋನಗಳಿಂದ ತನಿಖೆ:</strong> ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಅನಿಸಿದೆ. ಅದಾಗ್ಯೂ ವೈದ್ಯಕೀಯ ವರದಿ ಬರುವ ತನಕ ಕಾಯಬೇಕಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ರವಿ ಅವರ ಸಾವು ಪ್ರಕರಣ ಬೇಧಿಸಿಲು ಪೊಲೀಸರು ಡಿಸಿಪಿ ರೋಹಿಣಿ ಕಟೋಚ್ ಅವರ ನೇತೃತ್ವದಲ್ಲಿ ವಿಶೇಷ ತಂಡವೊಂದನ್ನು ರಚಿಸಿದ್ದಾರೆ. ರೋಹಿಣಿ ಅವರು ಶೈಕ್ಷಣಿಕವಾಗಿ ವೈದ್ಯಕೀಯ ವಿಜ್ಞಾನ ಅಭ್ಯಸಿಸಿದ್ದಾರೆ.</p>.<p>ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದ ರವಿ ಅವರು ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದರು. ಅಲ್ಲಿನ ಮರಳು ಮಾಫಿಯಾವನ್ನು ಮಟ್ಟಹಾಕಿದ್ದರು. ಬಳಿಕ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ಬೆಂಗಳೂರಿಗೆ ಬಂದಿದ್ದರು.</p>.<p>2009ರ ಬ್ಯಾಚ್ನ ಕರ್ನಾಟಕ ಕೇಡರಿನ ಅಧಿಕಾರಿಯಾಗಿದ್ದ ರವಿ ಅವರು, ಬೆಂಗಳೂರಿಗೆ ಬಂದಾಗಿನಿಂದ ರಿಯಲ್ ಎಸ್ಟೇಟ್ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದರು. ಮಾರಾಟ ತೆರಿಗೆ ವಂಚಿಸುತ್ತಿದ್ದವರನ್ನು ಪತ್ತೆ ಮಾಡಿ ನಾಲ್ಕು ತಿಂಗಳಲ್ಲಿ 125 ಕೋಟಿ ರೂಪಾಯಿ ವಸೂಲಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ಕೋಲಾರ್: </strong>ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ‘ಅಸಹಜ’ ಸಾವಿಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯಲ್ಲಿ ಮಂಗಳವಾರ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ. ಹೆದ್ದಾರಿ ತಡೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಅಲ್ಲದೇ, ಉದ್ರಿಕ್ತ ಪ್ರತಿಭಟನಾಕಾರರು ಸ್ಥಳೀಯ ಶಾಸಕ ವರ್ತೂರು ಪ್ರಕಾಶ್ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಮಧ್ಯೆ ಪ್ರವೇಶಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> <strong>ಸದನದಲ್ಲೂ ಪ್ರತಿಧ್ವನಿ:</strong> ವಿಧಾನಮಂಡಳದ ಬಜೆಟ್ ಅಧಿವೇಶನದಲ್ಲಿ ರವಿ ಅವರ ಸಾವಿಗೆ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ರವಿ ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.</p>.<p><strong>ಎಲ್ಲಾ ಕೋನಗಳಿಂದ ತನಿಖೆ:</strong> ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಅನಿಸಿದೆ. ಅದಾಗ್ಯೂ ವೈದ್ಯಕೀಯ ವರದಿ ಬರುವ ತನಕ ಕಾಯಬೇಕಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ರವಿ ಅವರ ಸಾವು ಪ್ರಕರಣ ಬೇಧಿಸಿಲು ಪೊಲೀಸರು ಡಿಸಿಪಿ ರೋಹಿಣಿ ಕಟೋಚ್ ಅವರ ನೇತೃತ್ವದಲ್ಲಿ ವಿಶೇಷ ತಂಡವೊಂದನ್ನು ರಚಿಸಿದ್ದಾರೆ. ರೋಹಿಣಿ ಅವರು ಶೈಕ್ಷಣಿಕವಾಗಿ ವೈದ್ಯಕೀಯ ವಿಜ್ಞಾನ ಅಭ್ಯಸಿಸಿದ್ದಾರೆ.</p>.<p>ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದ ರವಿ ಅವರು ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದರು. ಅಲ್ಲಿನ ಮರಳು ಮಾಫಿಯಾವನ್ನು ಮಟ್ಟಹಾಕಿದ್ದರು. ಬಳಿಕ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ಬೆಂಗಳೂರಿಗೆ ಬಂದಿದ್ದರು.</p>.<p>2009ರ ಬ್ಯಾಚ್ನ ಕರ್ನಾಟಕ ಕೇಡರಿನ ಅಧಿಕಾರಿಯಾಗಿದ್ದ ರವಿ ಅವರು, ಬೆಂಗಳೂರಿಗೆ ಬಂದಾಗಿನಿಂದ ರಿಯಲ್ ಎಸ್ಟೇಟ್ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದರು. ಮಾರಾಟ ತೆರಿಗೆ ವಂಚಿಸುತ್ತಿದ್ದವರನ್ನು ಪತ್ತೆ ಮಾಡಿ ನಾಲ್ಕು ತಿಂಗಳಲ್ಲಿ 125 ಕೋಟಿ ರೂಪಾಯಿ ವಸೂಲಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>