<p><strong>ಚೆನ್ನೈ:</strong> ತಮಿಳುನಾಡಿನಲ್ಲಿ 2004ರಲ್ಲಿ ನಡೆದ ಕಾಂಚೀಪುರಂ ವರದರಾಜ ಪೆರುಮಾಳ್ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಶಂಕರರಾಮನ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ 23 ಜನರನ್ನು ಬುಧವಾರ ಪುದುಚೇರಿ ನ್ಯಾಯಾಲಯವು ಖುಲಾಸೆಗೊಳಿಸಿದೆ.</p>.<p>ಕಂಚಿ ಕಾಮಕೋಟಿ ಪೀಠದ ಹಿರಿಯ ಸ್ವಾಮೀಜಿ ಜಯೇಂದ್ರ ಸರಸ್ವತಿ ಮತ್ತು ಕಿರಿಯ ಸ್ವಾಮೀಜಿಯಾದ ವಿಜಯೇಂದ್ರ ಅವರು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದರು.<br /> <br /> ಸುದೀರ್ಘ ಒಂಬತ್ತು ವರ್ಷಗಳ ಕಾಲ ನಡೆದ ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ.ಎಸ್.ಮುರುಗನ್ ಪೂರ್ಣಗೊಳಿಸಿ, ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.<br /> <br /> ಚೆಂಗಲ್ಪೇಟ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಯನ್ನು ಜಯೇಂದ್ರ ಸ್ವಾಮೀಜಿಯವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ನೀಡಿದ ಆದೇಶದನ್ವಯ 2005ರಲ್ಲಿ ಪುದುಚೇರಿ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.<br /> <br /> 2004ರ ಸೆ.3ರಂದು ವರದರಾಜ ಪೆರುಮಾಳ್ ದೇವಸ್ಥಾನದ ಆವರಣದಲ್ಲಿ ನಡೆದ ಈ ಕೊಲೆ ಪ್ರಕರಣದಲ್ಲಿ ದೇವಸ್ಥಾನದ ಮತ್ತೋರ್ವ ವ್ಯವಸ್ಥಾಪಕ ಸುಂದರೇಶನ್ ಮತ್ತು ಜಯೇಂದ್ರ ಸರಸ್ವತಿ ಅವರ ಸಹೋದರ ರಘು ಸೇರಿದಂತೆ ಒಟ್ಟು 24 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.<br /> <br /> 24 ಜನ ಆರೋಪಿಗಳ ಪೈಕಿ ಒಬ್ಬನಾದ ಕಾಥಿರಾವನ್ ಅವರನ್ನು ಈ ವರ್ಷದ ಮಾರ್ಚ್ನಲ್ಲಿ ಕೆ.ಕೆ.ನಗರದಲ್ಲಿ ಹತ್ಯೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ 2004ರಲ್ಲಿ ನಡೆದ ಕಾಂಚೀಪುರಂ ವರದರಾಜ ಪೆರುಮಾಳ್ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಶಂಕರರಾಮನ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ 23 ಜನರನ್ನು ಬುಧವಾರ ಪುದುಚೇರಿ ನ್ಯಾಯಾಲಯವು ಖುಲಾಸೆಗೊಳಿಸಿದೆ.</p>.<p>ಕಂಚಿ ಕಾಮಕೋಟಿ ಪೀಠದ ಹಿರಿಯ ಸ್ವಾಮೀಜಿ ಜಯೇಂದ್ರ ಸರಸ್ವತಿ ಮತ್ತು ಕಿರಿಯ ಸ್ವಾಮೀಜಿಯಾದ ವಿಜಯೇಂದ್ರ ಅವರು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದರು.<br /> <br /> ಸುದೀರ್ಘ ಒಂಬತ್ತು ವರ್ಷಗಳ ಕಾಲ ನಡೆದ ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ.ಎಸ್.ಮುರುಗನ್ ಪೂರ್ಣಗೊಳಿಸಿ, ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.<br /> <br /> ಚೆಂಗಲ್ಪೇಟ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಯನ್ನು ಜಯೇಂದ್ರ ಸ್ವಾಮೀಜಿಯವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ನೀಡಿದ ಆದೇಶದನ್ವಯ 2005ರಲ್ಲಿ ಪುದುಚೇರಿ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.<br /> <br /> 2004ರ ಸೆ.3ರಂದು ವರದರಾಜ ಪೆರುಮಾಳ್ ದೇವಸ್ಥಾನದ ಆವರಣದಲ್ಲಿ ನಡೆದ ಈ ಕೊಲೆ ಪ್ರಕರಣದಲ್ಲಿ ದೇವಸ್ಥಾನದ ಮತ್ತೋರ್ವ ವ್ಯವಸ್ಥಾಪಕ ಸುಂದರೇಶನ್ ಮತ್ತು ಜಯೇಂದ್ರ ಸರಸ್ವತಿ ಅವರ ಸಹೋದರ ರಘು ಸೇರಿದಂತೆ ಒಟ್ಟು 24 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.<br /> <br /> 24 ಜನ ಆರೋಪಿಗಳ ಪೈಕಿ ಒಬ್ಬನಾದ ಕಾಥಿರಾವನ್ ಅವರನ್ನು ಈ ವರ್ಷದ ಮಾರ್ಚ್ನಲ್ಲಿ ಕೆ.ಕೆ.ನಗರದಲ್ಲಿ ಹತ್ಯೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>