<p><strong>ನವದೆಹಲಿ (ಪಿಟಿಐ): </strong>ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ವಿವಾದಾತ್ಮಕ ಭೂಸ್ವಾಧೀನ ಸುಗ್ರೀವಾಜ್ಞೆ ಅವಧಿ ಮುಗಿಯತ್ತ ಬಂದಿದ್ದರೂ ಸರ್ಕಾರ ಮೌನವಹಿಸಿದೆ. ‘ಈ ಸುಗ್ರೀವಾಜ್ಞೆಯ ಅವಧಿಯು ಏಪ್ರಿಲ್ 5ರಂದು ಮುಗಿಯಲಿದೆ. ನಂತರ ಏನು ಮಾಡಬೇಕು ಎಂಬುದನ್ನು ಆ ಬಳಿಕ ನಿರ್ಧರಿಸುತ್ತೇವೆ’ ಎಂದು ಕೇಂದ್ರ ಸಚಿವ ಸಂಪುಟದ ಸದಸ್ಯರೊಬ್ಬರು ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.</p>.<p>2013ರ ಡಿಸೆಂಬರ್ 31ರಂದು ಕೇಂದ್ರ ಸರ್ಕಾರವು ಈ ಸುಗ್ರೀವಾಜ್ಞೆ ಹೊರಡಿಸಿತ್ತು. ಸಂಸತ್ತಿನ ಅಧಿವೇಶನ ಆರಂಭಗೊಂಡ 42 ದಿನಗಳಲ್ಲಿ ಸುಗ್ರೀವಾಜ್ಞೆಗೆ ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆಯಬೇಕು ಎಂಬುದು ನಿಯಮ. ಸಂಸತ್ತಿನ ಅನುಮೋದನೆ ಪಡೆಯುವಲ್ಲಿ ಸರ್ಕಾರ ವಿಫಲವಾದರೆ, ಅದು ಅನೂರ್ಜಿತಗೊಳ್ಳುತ್ತದೆ.</p>.<p><br /> ಕಳೆದ ಫೆಬ್ರುವರಿ 23ರಂದು ಆರಂಭಗೊಂಡಿರುವ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಅವಧಿ ಮಾರ್ಚ್ 20ರಂದು ಮುಗಿದಿದೆ. ಒಂದು ತಿಂಗಳ ರಜೆಯ ಬಳಿಕ ಮತ್ತೆ ಏಪ್ರಿಲ್ 20ರಂದು ಆರಂಭಗೊಳ್ಳಲಿದ್ದು ಮೇ ತಿಂಗಳ 8ರಂದು ಮುಗಿಯಲಿದೆ.</p>.<p>ಅಧಿವೇಶನ ಆರಂಭಗೊಂಡು ಏಪ್ರಿಲ್ 5ಕ್ಕೆ 42 ದಿನಗಳ ಅವಧಿ ಪೂರ್ಣಗೊಳ್ಳುವುದರಿಂದ ಸುಗ್ರೀವಾಜ್ಞೆಯು ಅನೂರ್ಜಿತಗೊಳ್ಳುವ ಸಾಧ್ಯತೆಗಳಿವೆ.</p>.<p>2013ರ ಭೂಸ್ವಾಧೀನ ಕಾಯ್ದೆಯ ತಿದ್ದುಪಡಿಗಳೊಂದಿಗೆ ಲೋಕಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಸರ್ಕಾರ ಸಫಲವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇದೆ. ಆದ್ದರಿಂದ ರಾಜ್ಯಸಭೆಯಲ್ಲಿ ಸಿಲುಕಿದೆ.</p>.<p>ಮತ್ತೊಂದೆಡೆ, ಯಾವುದೇ ದೊಡ್ಡ ಮಟ್ಟದ ಹೂಡಿಕೆಯ ಯೋಜನೆಗಳು ಅನುಮತಿಗಾಗಿ ಕಾಯುತ್ತಿಲ್ಲವಾದ್ದರಿಂದ ಸರ್ಕಾರವು ಭೂಸ್ವಾಧೀನ ಮಸೂದೆಯ ಬಗ್ಗೆ ಮರು ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ವಿವಾದಾತ್ಮಕ ಭೂಸ್ವಾಧೀನ ಸುಗ್ರೀವಾಜ್ಞೆ ಅವಧಿ ಮುಗಿಯತ್ತ ಬಂದಿದ್ದರೂ ಸರ್ಕಾರ ಮೌನವಹಿಸಿದೆ. ‘ಈ ಸುಗ್ರೀವಾಜ್ಞೆಯ ಅವಧಿಯು ಏಪ್ರಿಲ್ 5ರಂದು ಮುಗಿಯಲಿದೆ. ನಂತರ ಏನು ಮಾಡಬೇಕು ಎಂಬುದನ್ನು ಆ ಬಳಿಕ ನಿರ್ಧರಿಸುತ್ತೇವೆ’ ಎಂದು ಕೇಂದ್ರ ಸಚಿವ ಸಂಪುಟದ ಸದಸ್ಯರೊಬ್ಬರು ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.</p>.<p>2013ರ ಡಿಸೆಂಬರ್ 31ರಂದು ಕೇಂದ್ರ ಸರ್ಕಾರವು ಈ ಸುಗ್ರೀವಾಜ್ಞೆ ಹೊರಡಿಸಿತ್ತು. ಸಂಸತ್ತಿನ ಅಧಿವೇಶನ ಆರಂಭಗೊಂಡ 42 ದಿನಗಳಲ್ಲಿ ಸುಗ್ರೀವಾಜ್ಞೆಗೆ ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆಯಬೇಕು ಎಂಬುದು ನಿಯಮ. ಸಂಸತ್ತಿನ ಅನುಮೋದನೆ ಪಡೆಯುವಲ್ಲಿ ಸರ್ಕಾರ ವಿಫಲವಾದರೆ, ಅದು ಅನೂರ್ಜಿತಗೊಳ್ಳುತ್ತದೆ.</p>.<p><br /> ಕಳೆದ ಫೆಬ್ರುವರಿ 23ರಂದು ಆರಂಭಗೊಂಡಿರುವ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಅವಧಿ ಮಾರ್ಚ್ 20ರಂದು ಮುಗಿದಿದೆ. ಒಂದು ತಿಂಗಳ ರಜೆಯ ಬಳಿಕ ಮತ್ತೆ ಏಪ್ರಿಲ್ 20ರಂದು ಆರಂಭಗೊಳ್ಳಲಿದ್ದು ಮೇ ತಿಂಗಳ 8ರಂದು ಮುಗಿಯಲಿದೆ.</p>.<p>ಅಧಿವೇಶನ ಆರಂಭಗೊಂಡು ಏಪ್ರಿಲ್ 5ಕ್ಕೆ 42 ದಿನಗಳ ಅವಧಿ ಪೂರ್ಣಗೊಳ್ಳುವುದರಿಂದ ಸುಗ್ರೀವಾಜ್ಞೆಯು ಅನೂರ್ಜಿತಗೊಳ್ಳುವ ಸಾಧ್ಯತೆಗಳಿವೆ.</p>.<p>2013ರ ಭೂಸ್ವಾಧೀನ ಕಾಯ್ದೆಯ ತಿದ್ದುಪಡಿಗಳೊಂದಿಗೆ ಲೋಕಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಸರ್ಕಾರ ಸಫಲವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇದೆ. ಆದ್ದರಿಂದ ರಾಜ್ಯಸಭೆಯಲ್ಲಿ ಸಿಲುಕಿದೆ.</p>.<p>ಮತ್ತೊಂದೆಡೆ, ಯಾವುದೇ ದೊಡ್ಡ ಮಟ್ಟದ ಹೂಡಿಕೆಯ ಯೋಜನೆಗಳು ಅನುಮತಿಗಾಗಿ ಕಾಯುತ್ತಿಲ್ಲವಾದ್ದರಿಂದ ಸರ್ಕಾರವು ಭೂಸ್ವಾಧೀನ ಮಸೂದೆಯ ಬಗ್ಗೆ ಮರು ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>