ಮಂಗಳೂರು: ಹಿರಿಯ ಶಿಕ್ಷಣ ತಜ್ಞ ಹಾಗೂ ಕೋಮು ಸೌಹಾರ್ದ ವೇದಿಕೆ ಸಹಿತ ವಿವಿಧ ವಿಚಾರ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ (75) ಭಾನುವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಅವರ ಇಚ್ಛೆಯಂತೆ ದೇಹವನ್ನು ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದೆ.