ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಆಯೋಗದ ಎಚ್ಚರಿಕೆ

Last Updated 10 ಏಪ್ರಿಲ್ 2014, 13:46 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಚುನಾವಣಾ ಪ್ರಚಾರದ ವೇಳೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ  ವಿರುದ್ಧ `ಅವಹೇಳನಕಾರಿ' ಪದ ಬಳಸಿ ಟೀಕೆ ಮಾಡಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗವು ಗುರುವಾರ ಎಚ್ಚರಿಕೆ ನೀಡಿದೆ.

ಇದೇ ವೇಳೆ ಮೋದಿ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಸಿದ್ದರಾಮಯ್ಯ ಅವರು ನೀಡಿದ ವಿವರಣೆಯನ್ನು ತಿರಸ್ಕರಿಸಿದ  ಆಯೋಗವು ಭವಿಷ್ಯದಲ್ಲಿ `ಅತ್ಯಂತ ಎಚ್ಚರಿಕೆ'ಯಿಂದ ಇರುವಂತೆ ತಿಳಿಸಿದೆ.

`ಪ್ರಮುಖ ರಾಜಕೀಯ ಪಕ್ಷವೊಂದರ ಮುಖಂಡರ ವಿರುದ್ಧ ಬಳಸಿರುವ ಪದ ಕುರಿತಂತೆ ನೀವು ಆಯೋಗಕ್ಕೆ ನೀಡಿದ ವಿವರಣೆಯನ್ನು ಒಪ್ಪಲಾಗದು' ಎಂದು ಆಯೋಗ ಹೇಳಿದೆ.

ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರ ಸಮಾವೇಶವೊಂದರಲ್ಲಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಅವರನ್ನು `ನರಹಂತಕ' ಎಂದು ಕರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT