ಬೆಂಗಳೂರು: ಫೆಬ್ರುವರಿ 1ರಿಂದ 3ರ ವರೆಗೆ ಶ್ರವಣಬೆಳಗೊಳದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ ಡಾ. ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಸಿದರು.
‘ಇದುವರೆಗೆ ನಡೆದ 80 ಸಮ್ಮೇಳನಗಳಲ್ಲಿ ದಲಿತ ವರ್ಗಕ್ಕೆ ನ್ಯಾಯ ಸಿಕ್ಕಿಲ್ಲ ಎಂಬ ಅಸಮಾಧಾನಕ್ಕೆ ಕಸಾಪ ಸ್ಪಂದಿಸಿದೆ. ಕಸಾಪಕ್ಕೆ ನೂರು ವರ್ಷ ತುಂಬಿದ ಈ ಸಂದರ್ಭದಲ್ಲಿ ಅದನ್ನು ಸ್ಥಾಪಿಸಿದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಸಾಮಾಜಿಕ ನ್ಯಾಯದ ಆಶಯಕ್ಕೂ ಗೌರವ ಸಂದಿದೆ’ ಎಂದರು.
ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದ್ದರೂ ಅದೇ ಪ್ರಮುಖ ಅಂಶವಲ್ಲ. ಸಿದ್ದಲಿಂಗಯ್ಯ ಅವರ ಸಾಹಿತ್ಯ, ಚಿಂತನಾ ಕ್ರಮವನ್ನೂ ಪರಿಗಣಿಸಲಾಗಿದೆ ಎಂದು ಹೇಳಿದರು.
ದೇವನೂರ ಆಶಯದಂತೆ ಸಮ್ಮೇಳನ