<p><strong>ಸಾಗರ:</strong> ಅಖಿಲ ಭಾರತ ಕೈಮಗ್ಗ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕೈಮಗ್ಗ ಸತ್ಯಾಗ್ರಹದ ಅಂಗವಾಗಿ ಕರ್ನಾಟಕದ ವಿವಿಧೆಡೆ ಸರ್ವೋದಯ ದಿನವಾದ ಜ.30ರಂದು (ಗುರುವಾರ) ನೇಕಾರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.<br /> <br /> ಅದರ ಭಾಗವಾಗಿ ಇಲ್ಲಿಗೆ ಸಮೀಪದ ಹೆಗ್ಗೋಡು ಗ್ರಾಮದಲ್ಲಿರುವ ಶ್ರಮಜೀವಿ ಆಶ್ರಮದಲ್ಲಿ ರಂಗಕರ್ಮಿ ಹಾಗೂ ಚರಕ ಸಂಸ್ಥೆಯ ಪ್ರಮುಖ–ರಾದ ಪ್ರಸನ್ನ ಅವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.<br /> <br /> ಸರ್ಕಾರ ಪಾರಂಪರಿಕ ನೇಕಾರರ ರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿ ಘೋಷಿಸುವವರೆಗೂ ಪ್ರಸನ್ನ ಅವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಚರಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಹಾಗೂ ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುರುವಾರ ಬೆಳಿಗ್ಗೆ 10 ಗಂಟೆಗೆ ಶ್ರಮಜೀವಿ ಆಶ್ರಮದಲ್ಲಿ ಸರ್ವೋದಯ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು ರೈತ ಮುಖಂಡ ಕಡಿದಾಳು ಶಾಮಣ್ಣ, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ, ವಿಮರ್ಶಕ ಡಿ.ಎಸ್.ನಾಗಭೂಷಣ್, ಕವಯಿತ್ರಿ ಸವಿತಾ ನಾಗಭೂಷಣ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.<br /> <br /> ಪ್ರಸನ್ನ ಮಾತನಾಡಿ ಪಾರಂಪರಿಕ ಕೈಮಗ್ಗ ನೇಕಾರಿಕೆಯನ್ನು ಉಳಿಸುವ ಸಂಬಂಧ ಐದು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಈ ಸಂಬಂಧ ಗಜೇಂದ್ರಗಡದಿಂದ ಬಾದಾಮಿಯವರೆಗೆ 13 ದಿನಗಳ ಕಾಲ 245 ಕಿ.ಮೀ ದೂರ ನೇಕಾರರು ಪಾದಯಾತ್ರೆ ನಡೆಸಿದ್ದಾರೆ. ಆದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಸಾಹಿತಿ ಯು.ಆರ್.ಅನಂತಮೂರ್ತಿ ಅವರು ಉಪವಾಸ ಕೈಗೊಳ್ಳುವುದು ಬೇಡ ಎಂದು ಮಾಡಿರುವ ಮನವಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಅನಂತಮೂರ್ತಿ ಅವರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಇದು ಹಠಕ್ಕೆ ಬಿದ್ದು ಮಾಡುತ್ತಿರುವ ಉಪವಾಸ ಅಲ್ಲ.<br /> <br /> ಅದೇ ರೀತಿ ಸರ್ಕಾರ ಅಥವಾ ಯಾವುದೇ ಪಕ್ಷದ ವಿರುದ್ದವೂ ಅಲ್ಲ. ಸರ್ಕಾರವನ್ನಷ್ಟೆ ಅಲ್ಲದೆ ಆಧುನಿಕ ನಾಗರಿಕತೆಯ ಹುಸಿ ಅಭಿವೃದ್ಧಿಯ ಭ್ರಮೆಯಲ್ಲಿರುವ ಜನರನ್ನು ಎಚ್ಚರಿಸಲು ಕೈಗೊಳ್ಳುತ್ತಿರುವ ಉಪವಾಸ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಅಖಿಲ ಭಾರತ ಕೈಮಗ್ಗ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕೈಮಗ್ಗ ಸತ್ಯಾಗ್ರಹದ ಅಂಗವಾಗಿ ಕರ್ನಾಟಕದ ವಿವಿಧೆಡೆ ಸರ್ವೋದಯ ದಿನವಾದ ಜ.30ರಂದು (ಗುರುವಾರ) ನೇಕಾರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.<br /> <br /> ಅದರ ಭಾಗವಾಗಿ ಇಲ್ಲಿಗೆ ಸಮೀಪದ ಹೆಗ್ಗೋಡು ಗ್ರಾಮದಲ್ಲಿರುವ ಶ್ರಮಜೀವಿ ಆಶ್ರಮದಲ್ಲಿ ರಂಗಕರ್ಮಿ ಹಾಗೂ ಚರಕ ಸಂಸ್ಥೆಯ ಪ್ರಮುಖ–ರಾದ ಪ್ರಸನ್ನ ಅವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.<br /> <br /> ಸರ್ಕಾರ ಪಾರಂಪರಿಕ ನೇಕಾರರ ರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿ ಘೋಷಿಸುವವರೆಗೂ ಪ್ರಸನ್ನ ಅವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಚರಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಹಾಗೂ ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುರುವಾರ ಬೆಳಿಗ್ಗೆ 10 ಗಂಟೆಗೆ ಶ್ರಮಜೀವಿ ಆಶ್ರಮದಲ್ಲಿ ಸರ್ವೋದಯ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು ರೈತ ಮುಖಂಡ ಕಡಿದಾಳು ಶಾಮಣ್ಣ, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ, ವಿಮರ್ಶಕ ಡಿ.ಎಸ್.ನಾಗಭೂಷಣ್, ಕವಯಿತ್ರಿ ಸವಿತಾ ನಾಗಭೂಷಣ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.<br /> <br /> ಪ್ರಸನ್ನ ಮಾತನಾಡಿ ಪಾರಂಪರಿಕ ಕೈಮಗ್ಗ ನೇಕಾರಿಕೆಯನ್ನು ಉಳಿಸುವ ಸಂಬಂಧ ಐದು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಈ ಸಂಬಂಧ ಗಜೇಂದ್ರಗಡದಿಂದ ಬಾದಾಮಿಯವರೆಗೆ 13 ದಿನಗಳ ಕಾಲ 245 ಕಿ.ಮೀ ದೂರ ನೇಕಾರರು ಪಾದಯಾತ್ರೆ ನಡೆಸಿದ್ದಾರೆ. ಆದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಸಾಹಿತಿ ಯು.ಆರ್.ಅನಂತಮೂರ್ತಿ ಅವರು ಉಪವಾಸ ಕೈಗೊಳ್ಳುವುದು ಬೇಡ ಎಂದು ಮಾಡಿರುವ ಮನವಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಅನಂತಮೂರ್ತಿ ಅವರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಇದು ಹಠಕ್ಕೆ ಬಿದ್ದು ಮಾಡುತ್ತಿರುವ ಉಪವಾಸ ಅಲ್ಲ.<br /> <br /> ಅದೇ ರೀತಿ ಸರ್ಕಾರ ಅಥವಾ ಯಾವುದೇ ಪಕ್ಷದ ವಿರುದ್ದವೂ ಅಲ್ಲ. ಸರ್ಕಾರವನ್ನಷ್ಟೆ ಅಲ್ಲದೆ ಆಧುನಿಕ ನಾಗರಿಕತೆಯ ಹುಸಿ ಅಭಿವೃದ್ಧಿಯ ಭ್ರಮೆಯಲ್ಲಿರುವ ಜನರನ್ನು ಎಚ್ಚರಿಸಲು ಕೈಗೊಳ್ಳುತ್ತಿರುವ ಉಪವಾಸ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>